May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

ಬೆಳ್ತಂಗಡಿ : ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ಹಿಡಿದಿದ್ದು‌. ಈ ವೇಳೆ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕರೆಸಿ ಎರಡು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ‌.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಅಂಗಳದಲ್ಲಿ ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ ಬೇಟೆಯಾಡುತ್ತಿರುವಾಗ ಮನೆಯವರು ತಕ್ಷಣ ಸ್ನೇಕ್ ಅಶೋಕ್ ಲಾಯಿಲ ಅವರನ್ನು ಸ್ಥಳಕ್ಕೆ ಕರೆಸಿ ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.

ಹೆಬ್ಬಾವಿಗೆ ಸಣ್ಣಪುಟ್ಟ ಗಾಯವಾಗಿದ್ದು‌. ಅಪಾಯದಿಂದ ಪಾರಾಗಿದೆ. ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಸುರಕ್ಷಿತವಾಗಿ ಸ್ನೇಕ್ ಅಶೋಕ್ ಲಾಯಿಲರವರು ಕಾಡಿಗೆ ಬಿಟ್ಟಿದ್ದಾರೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya
error: Content is protected !!