May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

ಕಲ್ಮಂಜ : ಕಲ್ಮಂಜ ಗ್ರಾಮದ ಊರವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಲ್ಮಂಜ ಈ ಸಂಘಟನೆಗಳ ಸಹಕಾರದೊಂದಿಗೆ ನೂತನ ‘ಸದಾಶಿವೇಶ್ವರ’ ಭಜನಾ ತಂಡವನ್ನು ರಚನೆ ಮಾಡಲಾಯಿತು.

ಭಜನಾ ತಂಡವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಮಿತಿಯ ಜಯಂತ್ ರಾವ್ ಕಲ್ಮಂಜ, ಸಿದ್ಧಬೈಲು ಪರಾರಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ಗೌಡ, ಕಲ್ಮಂಜ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಶಾಂತಪ್ಪ ಗೌಡ, ಮುಂಡಾಜೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ನಾಗರಾಜ್ ನಾಯ್ಕ್ ಒಂಜರಾಬೈಲ್, ಕಲ್ಮಂಜ ಗ್ರಾಮ ಪಂಚಾಯತಿಯ ಸದಸ್ಯ ಪ್ರವೀಣ್ ಗೌಡ ಕರಿಯನೆಲ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾದ ಧನಂಜಯ ಎಂ, ಸಮಿತಿಯ ಕೋಶಾಧಿಕಾರಿಯಾದ ಅನಿಲ್ ಗೌಡ, ಸತ್ಯನ ಪಲ್ಕೆ ಜ್ಞಾನ ವಿಕಾಸ ತಂಡದ ಮಾಜಿ ಅಧ್ಯಕ್ಷೆ ಶ್ರೀಮತಿ ಜಾನಕಿ ಗೌಡ, ಜ್ಞಾನ ವಿಕಾಸ ತಂಡದ ಸದಸ್ಯರಾದ ಶ್ರೀಮತಿ ರೇವತಿ ಮಾನಿಂಜೆ, ಸಿದ್ಧಬೈಲು ಪರಾರಿ ಶಾಲೆಯ ಎಸ್ ಡಿ ಎಮ್ ಸಿ ಸದಸ್ಯರಾದ ಕೃಷ್ಣಪ್ಪ ಒಂಜರಾಬೈಲ್ ಹಾಗೂ ಊರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಂತಪ್ಪ ಗೌಡ ಬನಾದಬೈಲ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು., ಶಾಂತಪ್ಪ ಎಂ. ಮದ್ಮಲ್ ಕಟ್ಟೆ ಧನ್ಯವಾದವಿತ್ತರು.

Related posts

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya
error: Content is protected !!