ವೇಣೂರು: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಕುಕ್ಕೇಡಿ ಗ್ರಾಮ ಪಂಚಾಯತ್ ಗೆ ಆಗಮಿಸಿ ಕುಕ್ಕೇಡಿ ಎಸ್.ಡಿ.ಎಂ ಐಟಿಐ ಸಂಸ್ಥೆಯ ಸಭಾ ಭವನದಲ್ಲಿ ರಥಯಾತ್ರೆಯ ಸಭಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಎಸ್.ಡಿ.ಎಂ ಐಟಿಐ ಸಂಸ್ಥೆಯ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ ರವರು ಉದ್ಘಾಟಿಸಿ ಉದ್ಘಾಟನಾ ಮಾತುಗಳನ್ನಾಡಿದರು.
ಸಭಾಧ್ಯಕ್ಷತೆಯನ್ನು ಕುಕ್ಕೇಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನಿತಾ ಪೂಜಾರಿಯವರು ವಹಿಸಿದ್ದರು.

ಮುಖ್ಯ ಭಾಷಣಕಾರ ನಿತಿನ್ ಅಂಡಿಂಜೆಯವರು ಪ್ರಧಾನಿ ನರೇಂದ್ರ ಮೋದಿಜಿಯವರ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಂಯೋಜಕರಾದ ಜಯಾನಂದರವರು, ಬೆಳ್ತಂಗಡಿ ಯೂನಿಯನ್ ಬ್ಯಾಂಕ್ ನ ವ್ಯವಸ್ಥಾಪಕರಾದ ನಾಗರಾಜ್, ವೇಣೂರು ಕೆನರಾ ಬ್ಯಾಂಕ್ ನ ವ್ಯವಸ್ಥಾಪಕರಾದ ಶ್ರೀಮತಿ ಉಷಾ ಉಪಸ್ಥಿತರಿದ್ದರು.
ಕುಕ್ಕೇಡಿ ಗ್ರಾಮ ಪಂಚಾಯತ್ ನ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಪದಾಧಿಕಾರಿಗಳು, ಎಸ್.ಡಿ.ಎಂ ಐಟಿಐ ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕುಕ್ಕೇಡಿ ಗ್ರಾಮ ಪಂಚಾಯತ್ ನ ಪ್ರಭಾರಿ ಅಭಿಜಿತ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ್ ರವರು ಧನ್ಯವಾದಗೈದರು. ಜಗನ್ನಾಥ್ ರವರು ಕಾರ್ಯಕ್ರಮ ನಿರೂಪಿಸಿದರು.
ಸನ್ಮಾನ
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾವಯವ ಕೃಷಿಕ ಶ್ರೀ ಅನಿಲ್ ಹೆಗ್ಡೆ ಮತ್ತು ಶ್ರೀಮತಿ ಸುನಂದಾ ಶೆಟ್ಟಿಯವರನ್ನು ಸನ್ಮಾನಿಸಲಾಯಿತು,ಜೊತೆಗೆ ಪೋಷಣ್ ಯೋಜನೆ ಅಡಿಯಲ್ಲಿ ಬೇಬಿ ತನ್ವಿ ಮತ್ತು ರನ್ವಿತ್ ಸೇರಿದಂತೆ ITI ಸಂಸ್ಥೆಯ ವಿಶೇಷ ಸಾಧನೆಗೈದ ನಾಲ್ವರು ವಿದ್ಯಾರ್ಥಿಗಳನ್ನು ವಿಶೇಷವಾಗಿ ಗೌರವಿಸಲಾಯಿತು.













