May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಮಡಂತ್ಯಾರು: ಶಾಲೆಯ ಪಾಠದ ಜೊತೆಗೆ ವ್ಯಕ್ತಿತ್ವ ವಿಕಸನ ಅಗತ್ಯ. ಆತ್ಮವಿಶ್ವಾಸದ ಕೊರತೆಯಿಂದಾಗಿ ಇಂದು ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ, ಭವಿಷ್ಯದ ಬಗ್ಗೆ ಕಲ್ಪನೆಗಳಿಲ್ಲದಿರುವುದು ಸಾಮಾನ್ಯವಾಗಿದೆ. ಪ್ರಬಲವಾದ ಇಚ್ಚಾಶಕ್ತಿಯಿಂದ ಯಶಸ್ಸು ಸಾಧ್ಯ. ಯಾವ ಕೆಲಸವನ್ನು ಶ್ರದ್ಧಾ ಮನಸ್ಸಿನಿಂದ ಪರಿಪೂರ್ಣವಾಗಿ ಮಾಡುತ್ತೇವೋ ಅವಾಗ ಜೀವನದಲ್ಲಿ ಉನ್ನತಿಗೆ ಏರಬಹುದಾಗಿದೆ ಎಂದು ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್ ಗಂಗಾಧರ ಆಳ್ವ ಹೇಳಿದರು.


ಅವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸವಾಲನ್ನು ಮೆಟ್ಟಿ ನಿಂತು ಮುಂದೆ ಸಾಗುವನು ಜೀವನದಲ್ಲಿ ಸಫಲನಾಗುತ್ತಾನೆ. ಶಾಲೆಯ ಪರೀಕ್ಷೆಯ ಜೊತೆಗೆ ಜೀವನದ ಪರೀಕ್ಷೆಯಲ್ಲಿ ಯಶಸ್ವಿಯಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಡಾ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್, ಅಣ್ಣಿಗೇರಿ ಶ್ರೀ ಶಾರದ ಪಬ್ಲಿಕ್ ಸ್ಕೂಲ್ ನ ನಿರ್ದೇಶಕಿ ಗ್ರೇಸ್ ನೊರೊನ್ಹಾ ಗೌರವ ಅತಿಥಿಗಳಾಗಿ ಪಾಲ್ಗೊಂಡರು.
ಸೇಕ್ರೆಡ್ ಹಾರ್ಟ್ ಪ್ರೌಢ ಶಾಲಾ ಹಾಗೂ ಕಾಲೇಜು ವಿಭಾಗದ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರಾದ ವಿನೋದ್ ರಾಕೇಶ್ ಡಿಸೋಜ, ಲಿಯೋ ರೊಡ್ರಿಗಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ,
ಪ್ರೌಢಶಾಲಾ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೆಕ್ಸಿನ್ ಪಿಂಟೊ, ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಲೀಟಾ ಲೋಬೊ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಜೆರೊಮ್ ಡಿಸೋಜ ವಾರ್ಷಿಕ ವರದಿ ವಾಚಿಸಿದರು. ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ಸ್ವಾಗತಿಸಿದರು. ಉಪನ್ಯಾಸಕ ಸೂರಜ್ ಚಾರ್ಲ್ಸ್ ಸಂಸ್ಥಾಪಕರಾದ ದಿ. ವಂ| ಲಿಗೋರಿ ಡಿಸೋಜ ರವರಿಗೆ ನುಡಿನಮನ ಸಲ್ಲಿಸಿದರು , ಶಿಕ್ಷಕಿ ಶಾಂತಿ ಮೇರಿ ಡಿಸೋಜ ವಂದಿಸಿದರು. ಉಪನ್ಯಾಸಕರಾದ ಸುಚಿತ್ರ ಕಲಾ ಶೆಟ್ಟಿ ಹಾಗೂ ಫ್ರೀಡಾ ಜ್ಯೋತಿ ವೇಗಸ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya
error: Content is protected !!