25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

ವೇಣೂರು:  ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಜನಮಂಗಲ ಕಾರ್ಯಕ್ರಮದ ಅಂಗವಾಗಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಡಿ. 17 ರಂದು ವೇಣೂರಿನ ಭರತೇಶ ಸಮುದಾಯ ಸಭಾಭವನದಲ್ಲಿ ಜರಗಲಿದೆ  ಎಂದು ಮಸ್ತಕಾಭಿಷೇಕ ಸಮಿತಿಯ ಪ್ರದಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹೇಳಿದ್ದಾರೆ.

ಅವರು ವೇಣೂರು ಯಾತ್ರಿ ನಿವಾಸದಲ್ಲಿ  ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬೆಳಿಗ್ಗೆ 9ಗಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲ ವಹಿಸಲಿದ್ದಾರೆ. ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ ಪ್ರವೀಣ್ ಕುಮಾರ್ ಇಂದ್ರ ವೇಣೂರು ಗ್ರಾಪಂ ಅಧ್ಯಕ್ಷ ನೇಮಯ್ಯ ಕುಲಾಲ್, ವೇಣೂರು ಪ್ಯಾಕ್ಸ್ ಅಧ್ಯಕ್ಷ ಸುಂದರ ಹೆಗಡೆ ಬಿ.ಇ. ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ,ರಕ್ತದಾನ ಶಿಬಿರ ಮೂಳೆ ಸಾಂಧ್ರತೆಯ ಪರೀಕ್ಷೆ, ಹೃದ್ರೋಗ  ತಪಾಸಣೆ, ಆಯುರ್ವೇದ ಚಿಕಿತ್ಸೆ, ಸ್ಥನ ರೋಗ ತಪಾಸಣೆ, ಸ್ಕ್ರೀನಿಂಗ್, ರಕ್ತಪರೀಕ್ಷೆ ಇತ್ಯಾದಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಸ್ತಕಾಭಿಷೇಕದ ಸ್ವಾಗತ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ, ಕೋಶಾಧಿಕಾರಿ ನೀಲೇಶ್ ಕಂಬಳಿ, ಜೊತೆ ಕಾರ್ಯದರ್ಶಿ ಡಾ| ಜಗದೀಶ್, ಸಂಚಾಲಕ ಡಾ| ಶಾಂತಿಪ್ರಸಾದ್ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya
error: Content is protected !!