38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಹೊಸಂಗಡಿ: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಜನಪ್ರಿಯ ಯೋಜನೆಗಳು ಕಟ್ಟಕಡೆಯ ಫಲಾನುಭವಿಗಳಿಗೂ ದೊರಕುವಂತಾಗಲಿ ಎನ್ನುವ ನಿಟ್ಟಿನಲ್ಲಿ ಮತ್ತು ಇದರ ಮಾಹಿತಿ ಎಲ್ಲರಿಗೂ ತಿಳಿದು ಪ್ರಯೋಜನ ಪಡೆಯುವಂತಾಗಲಿ ಎಂಬ ದ್ಯೇಯ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ. 11 ರಂದು ಹೊಸಂಗಡಿ ಗ್ರಾಮ ಪಂಚಾಯತ್ ಗೆ ಆಗಮಿಸಿದ್ದು ಸಂಭ್ರಮದಿಂದ ಬರಮಾಡಿಕೊಂಡರು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಉದ್ಘಾಟಿಸಿದರು.

ವೇದಿಕೆಯಲ್ಲಿ ಕೆನರಾ ಬ್ಯಾಂಕಿನ ವೇಣೂರು ಬ್ರಾಂಚ್ ಮೆನೆಜರ್ ಅಲೋಕ್, ನಿಕಟಪೂರ್ವ ಅಧ್ಯಕ್ಷ ಕರುಣಾಕರ ಬಡಕೋಡಿ, ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ನೀಡುವ ಉಷಾ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪಂಚಾಯತ್ ಪ್ರಬಾರಿ ದಿನಕರ ಕುಲಾಲ್ ಉಪಸ್ಥಿತರಿದ್ದರು .

ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಗೋಪಾಲಕೃಷ್ಣ ಭಟ್, ಸಂಜೀವಿನಿ ಸಂಘದ ಸದಸ್ಯೆ ಎಲ್ಲಾ ಬಗೆಯ ಕೃಷಿ ಹೈನುಗಾರಿಕೆ ತೊಡಗಿಸಿಕೊಂಡ ಸುಧಾ ಗಂಗಾಧರ್, ಜೇನು ಕೃಷಿ ಮಾಡುತ್ತಿರುವ ಶ್ರೀಧರ ಮಲೆಕುಡಿಯ, ಪೋಷಣ್ ಯೋಜನೆ ಅಡಿಯಲ್ಲಿ ಕು.ಲಿಪಿ, ಕು.ಪೂಜಿತಾ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!