23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಹೊಸಂಗಡಿ: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಜನಪ್ರಿಯ ಯೋಜನೆಗಳು ಕಟ್ಟಕಡೆಯ ಫಲಾನುಭವಿಗಳಿಗೂ ದೊರಕುವಂತಾಗಲಿ ಎನ್ನುವ ನಿಟ್ಟಿನಲ್ಲಿ ಮತ್ತು ಇದರ ಮಾಹಿತಿ ಎಲ್ಲರಿಗೂ ತಿಳಿದು ಪ್ರಯೋಜನ ಪಡೆಯುವಂತಾಗಲಿ ಎಂಬ ದ್ಯೇಯ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ. 11 ರಂದು ಹೊಸಂಗಡಿ ಗ್ರಾಮ ಪಂಚಾಯತ್ ಗೆ ಆಗಮಿಸಿದ್ದು ಸಂಭ್ರಮದಿಂದ ಬರಮಾಡಿಕೊಂಡರು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಉದ್ಘಾಟಿಸಿದರು.

ವೇದಿಕೆಯಲ್ಲಿ ಕೆನರಾ ಬ್ಯಾಂಕಿನ ವೇಣೂರು ಬ್ರಾಂಚ್ ಮೆನೆಜರ್ ಅಲೋಕ್, ನಿಕಟಪೂರ್ವ ಅಧ್ಯಕ್ಷ ಕರುಣಾಕರ ಬಡಕೋಡಿ, ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ನೀಡುವ ಉಷಾ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪಂಚಾಯತ್ ಪ್ರಬಾರಿ ದಿನಕರ ಕುಲಾಲ್ ಉಪಸ್ಥಿತರಿದ್ದರು .

ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಗೋಪಾಲಕೃಷ್ಣ ಭಟ್, ಸಂಜೀವಿನಿ ಸಂಘದ ಸದಸ್ಯೆ ಎಲ್ಲಾ ಬಗೆಯ ಕೃಷಿ ಹೈನುಗಾರಿಕೆ ತೊಡಗಿಸಿಕೊಂಡ ಸುಧಾ ಗಂಗಾಧರ್, ಜೇನು ಕೃಷಿ ಮಾಡುತ್ತಿರುವ ಶ್ರೀಧರ ಮಲೆಕುಡಿಯ, ಪೋಷಣ್ ಯೋಜನೆ ಅಡಿಯಲ್ಲಿ ಕು.ಲಿಪಿ, ಕು.ಪೂಜಿತಾ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!