22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಹೊಸಂಗಡಿ: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಜನಪ್ರಿಯ ಯೋಜನೆಗಳು ಕಟ್ಟಕಡೆಯ ಫಲಾನುಭವಿಗಳಿಗೂ ದೊರಕುವಂತಾಗಲಿ ಎನ್ನುವ ನಿಟ್ಟಿನಲ್ಲಿ ಮತ್ತು ಇದರ ಮಾಹಿತಿ ಎಲ್ಲರಿಗೂ ತಿಳಿದು ಪ್ರಯೋಜನ ಪಡೆಯುವಂತಾಗಲಿ ಎಂಬ ದ್ಯೇಯ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ. 11 ರಂದು ಹೊಸಂಗಡಿ ಗ್ರಾಮ ಪಂಚಾಯತ್ ಗೆ ಆಗಮಿಸಿದ್ದು ಸಂಭ್ರಮದಿಂದ ಬರಮಾಡಿಕೊಂಡರು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಉದ್ಘಾಟಿಸಿದರು.

ವೇದಿಕೆಯಲ್ಲಿ ಕೆನರಾ ಬ್ಯಾಂಕಿನ ವೇಣೂರು ಬ್ರಾಂಚ್ ಮೆನೆಜರ್ ಅಲೋಕ್, ನಿಕಟಪೂರ್ವ ಅಧ್ಯಕ್ಷ ಕರುಣಾಕರ ಬಡಕೋಡಿ, ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ನೀಡುವ ಉಷಾ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪಂಚಾಯತ್ ಪ್ರಬಾರಿ ದಿನಕರ ಕುಲಾಲ್ ಉಪಸ್ಥಿತರಿದ್ದರು .

ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಗೋಪಾಲಕೃಷ್ಣ ಭಟ್, ಸಂಜೀವಿನಿ ಸಂಘದ ಸದಸ್ಯೆ ಎಲ್ಲಾ ಬಗೆಯ ಕೃಷಿ ಹೈನುಗಾರಿಕೆ ತೊಡಗಿಸಿಕೊಂಡ ಸುಧಾ ಗಂಗಾಧರ್, ಜೇನು ಕೃಷಿ ಮಾಡುತ್ತಿರುವ ಶ್ರೀಧರ ಮಲೆಕುಡಿಯ, ಪೋಷಣ್ ಯೋಜನೆ ಅಡಿಯಲ್ಲಿ ಕು.ಲಿಪಿ, ಕು.ಪೂಜಿತಾ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya
error: Content is protected !!