24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಶಿರ್ಲಾಲು: ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಾದ ಕಿಸಾನ್ ಸಮ್ಮಾನ್., ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(ಪಿಎಂಎಫ್‌ಬಿವೈ), ಉಜ್ವಲ ಗ್ಯಾಸ್ ಯೋಜನೆ, ಪಿಂಚಣಿ ಆರೋಗ್ಯ ವಿಮೆ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಮಾಹಿತಿಯನ್ನು ಕೆನರಾ ಬ್ಯಾಂಕ್ ನೋಡೆಲ್ ಅಧಿಕಾರಿ ಉಷಾ ನಾಯಕ್ ಇವರು ವಿಸ್ತಾರವಾಗಿ ವಿವರಿಸಿದರು.

ಕೃಷಿ ಇಲಾಖೆ ಅಧಿಕಾರಿ ಅಭಿಲಾಷ್ ಕೇಂದ್ರ ಸರಕಾರದಿಂದ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಪ್ರಗತಿಪರ ಕೃಷಿಕರನ್ನು ಗ್ರಾಮದಲ್ಲಿ ಸ್ವಚ್ಛತಾ ಕೆಲಸ ಕಾರ್ಯ ಮಾಡುವ ಸ್ವಯಂಸೇವಕರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಕೆನರಾ ಬ್ಯಾಂಕ್ ಶಿರ್ಲಾಲು . ಮುಖ್ಯ ಕಾರ್ಯನಿರ್ವಾಹನ ಅಧಿಕಾರಿ ಫಲ್ಗುಣಿ ಮತ್ತು ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ್ ಅಧ್ಯಕ್ಷರು ಉಷಾ ಎಂ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಲ್ಲಿದಡ್ಡ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕುಮಾರ್ ಸಾಮಾನಿ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪುರಂದರ ಶಿರ್ಲಾಲು ಸ್ವಾಗತಿಸಿದರು. ಕೆನರಾ ಬ್ಯಾಂಕ್ ಸಿಬ್ಬಂದಿ ಉಮೇಶ್ ಶೆಟ್ಟಿ, ಮಾದವ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya
error: Content is protected !!