ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12 ರಂದು ನಡೆದಿದೆ.

ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ವಾರಿಜ ಟಿ. (53) ಎಂಬವರ ದೂರಿನಂತೆ, ಡಿ.12 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯನ್ನು ಯಾರೋ ದೂಡಿ, ಅವರ ಕೊರಳಿನಲ್ಲಿ ಧರಿಸಿದ್ದ ಚಿನ್ನದ ಮಾಲೆಯನ್ನು ಯಾರೋ ಎಳೆದು ತೆಗೆದಿರುತ್ತಾರೆ. ಆ ಸಮಯ ಮಹಿಳೆಯು ಬೊಬ್ಬೆ ಹೊಡೆದಿದ್ದು ಸುಮಾರು ಜನ ಪ್ರಯಾಣಿಕರು ಇದ್ದುದರಿಂದ ಮಹಿಳೆಯ ಕುತ್ತಿಗೆಯಿಂದ ಯಾರು ಚಿನ್ನದ ಮಾಲೆಯನ್ನು ತೆಗೆದಿರುತ್ತಾರೆ ಎಂದು ತಿಳಿದಿರುವುದಿಲ್ಲ ಹಾಗೂ ಸದ್ರಿ ಚಿನ್ನದ ಮಾಲೆಯು 36 ಗ್ರಾಂ ಇದ್ದು ಅಂದಾಜು ಮೌಲ್ಯ ರೂ.1.44 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!