30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12 ರಂದು ನಡೆದಿದೆ.

ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ವಾರಿಜ ಟಿ. (53) ಎಂಬವರ ದೂರಿನಂತೆ, ಡಿ.12 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯನ್ನು ಯಾರೋ ದೂಡಿ, ಅವರ ಕೊರಳಿನಲ್ಲಿ ಧರಿಸಿದ್ದ ಚಿನ್ನದ ಮಾಲೆಯನ್ನು ಯಾರೋ ಎಳೆದು ತೆಗೆದಿರುತ್ತಾರೆ. ಆ ಸಮಯ ಮಹಿಳೆಯು ಬೊಬ್ಬೆ ಹೊಡೆದಿದ್ದು ಸುಮಾರು ಜನ ಪ್ರಯಾಣಿಕರು ಇದ್ದುದರಿಂದ ಮಹಿಳೆಯ ಕುತ್ತಿಗೆಯಿಂದ ಯಾರು ಚಿನ್ನದ ಮಾಲೆಯನ್ನು ತೆಗೆದಿರುತ್ತಾರೆ ಎಂದು ತಿಳಿದಿರುವುದಿಲ್ಲ ಹಾಗೂ ಸದ್ರಿ ಚಿನ್ನದ ಮಾಲೆಯು 36 ಗ್ರಾಂ ಇದ್ದು ಅಂದಾಜು ಮೌಲ್ಯ ರೂ.1.44 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya
error: Content is protected !!