September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12 ರಂದು ನಡೆದಿದೆ.

ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ವಾರಿಜ ಟಿ. (53) ಎಂಬವರ ದೂರಿನಂತೆ, ಡಿ.12 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯನ್ನು ಯಾರೋ ದೂಡಿ, ಅವರ ಕೊರಳಿನಲ್ಲಿ ಧರಿಸಿದ್ದ ಚಿನ್ನದ ಮಾಲೆಯನ್ನು ಯಾರೋ ಎಳೆದು ತೆಗೆದಿರುತ್ತಾರೆ. ಆ ಸಮಯ ಮಹಿಳೆಯು ಬೊಬ್ಬೆ ಹೊಡೆದಿದ್ದು ಸುಮಾರು ಜನ ಪ್ರಯಾಣಿಕರು ಇದ್ದುದರಿಂದ ಮಹಿಳೆಯ ಕುತ್ತಿಗೆಯಿಂದ ಯಾರು ಚಿನ್ನದ ಮಾಲೆಯನ್ನು ತೆಗೆದಿರುತ್ತಾರೆ ಎಂದು ತಿಳಿದಿರುವುದಿಲ್ಲ ಹಾಗೂ ಸದ್ರಿ ಚಿನ್ನದ ಮಾಲೆಯು 36 ಗ್ರಾಂ ಇದ್ದು ಅಂದಾಜು ಮೌಲ್ಯ ರೂ.1.44 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!