25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12 ರಂದು ನಡೆದಿದೆ.

ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ವಾರಿಜ ಟಿ. (53) ಎಂಬವರ ದೂರಿನಂತೆ, ಡಿ.12 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯನ್ನು ಯಾರೋ ದೂಡಿ, ಅವರ ಕೊರಳಿನಲ್ಲಿ ಧರಿಸಿದ್ದ ಚಿನ್ನದ ಮಾಲೆಯನ್ನು ಯಾರೋ ಎಳೆದು ತೆಗೆದಿರುತ್ತಾರೆ. ಆ ಸಮಯ ಮಹಿಳೆಯು ಬೊಬ್ಬೆ ಹೊಡೆದಿದ್ದು ಸುಮಾರು ಜನ ಪ್ರಯಾಣಿಕರು ಇದ್ದುದರಿಂದ ಮಹಿಳೆಯ ಕುತ್ತಿಗೆಯಿಂದ ಯಾರು ಚಿನ್ನದ ಮಾಲೆಯನ್ನು ತೆಗೆದಿರುತ್ತಾರೆ ಎಂದು ತಿಳಿದಿರುವುದಿಲ್ಲ ಹಾಗೂ ಸದ್ರಿ ಚಿನ್ನದ ಮಾಲೆಯು 36 ಗ್ರಾಂ ಇದ್ದು ಅಂದಾಜು ಮೌಲ್ಯ ರೂ.1.44 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya
error: Content is protected !!