22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12 ರಂದು ನಡೆದಿದೆ.

ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ವಾರಿಜ ಟಿ. (53) ಎಂಬವರ ದೂರಿನಂತೆ, ಡಿ.12 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯನ್ನು ಯಾರೋ ದೂಡಿ, ಅವರ ಕೊರಳಿನಲ್ಲಿ ಧರಿಸಿದ್ದ ಚಿನ್ನದ ಮಾಲೆಯನ್ನು ಯಾರೋ ಎಳೆದು ತೆಗೆದಿರುತ್ತಾರೆ. ಆ ಸಮಯ ಮಹಿಳೆಯು ಬೊಬ್ಬೆ ಹೊಡೆದಿದ್ದು ಸುಮಾರು ಜನ ಪ್ರಯಾಣಿಕರು ಇದ್ದುದರಿಂದ ಮಹಿಳೆಯ ಕುತ್ತಿಗೆಯಿಂದ ಯಾರು ಚಿನ್ನದ ಮಾಲೆಯನ್ನು ತೆಗೆದಿರುತ್ತಾರೆ ಎಂದು ತಿಳಿದಿರುವುದಿಲ್ಲ ಹಾಗೂ ಸದ್ರಿ ಚಿನ್ನದ ಮಾಲೆಯು 36 ಗ್ರಾಂ ಇದ್ದು ಅಂದಾಜು ಮೌಲ್ಯ ರೂ.1.44 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!