23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12 ರಂದು ನಡೆದಿದೆ.

ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ವಾರಿಜ ಟಿ. (53) ಎಂಬವರ ದೂರಿನಂತೆ, ಡಿ.12 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯನ್ನು ಯಾರೋ ದೂಡಿ, ಅವರ ಕೊರಳಿನಲ್ಲಿ ಧರಿಸಿದ್ದ ಚಿನ್ನದ ಮಾಲೆಯನ್ನು ಯಾರೋ ಎಳೆದು ತೆಗೆದಿರುತ್ತಾರೆ. ಆ ಸಮಯ ಮಹಿಳೆಯು ಬೊಬ್ಬೆ ಹೊಡೆದಿದ್ದು ಸುಮಾರು ಜನ ಪ್ರಯಾಣಿಕರು ಇದ್ದುದರಿಂದ ಮಹಿಳೆಯ ಕುತ್ತಿಗೆಯಿಂದ ಯಾರು ಚಿನ್ನದ ಮಾಲೆಯನ್ನು ತೆಗೆದಿರುತ್ತಾರೆ ಎಂದು ತಿಳಿದಿರುವುದಿಲ್ಲ ಹಾಗೂ ಸದ್ರಿ ಚಿನ್ನದ ಮಾಲೆಯು 36 ಗ್ರಾಂ ಇದ್ದು ಅಂದಾಜು ಮೌಲ್ಯ ರೂ.1.44 ಲಕ್ಷ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!