22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ನಿರ್ವಹಣಾ ಸಂಘವು ಜಂಟಿಯಾಗಿ ಹೂಡಿಕೆದಾರರ ಜಾಗೃತಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಡಿ.12 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್. ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆಯನ್ನು ಸಿ.ಪಿ.ಎಫ್ SEBI ನೋಂದಾಯಿತ ಹೂಡಿಕೆಯ ಸಲಹೆಗಾರರಾದ ಲಿಯೋ ಅಮಲ್ ಇವರು ನೆರವೇರಿಸಿದರು.

ಉದ್ಘಾಟಕರು ಕಾರ್ಯಕ್ರಮವನ್ನು ಉದ್ದೇಶಿಸಿ ನಿಮ್ಮ ಭವಿಷ್ಯದ ಯೋಜನೆಗೆ ಅನುಗುಣವಾಗಿ ಹೂಡಿಕೆಯನ್ನು ಆಯ್ದುಕೊಳ್ಳಬೇಕೆಂದು ಸಲಹೆ ನೀಡಿದರು. ಆ ಬಳಿಕ ಸ್ವಪ್ನ ಶೆಣೈ ಅವರು ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿ ದೀರ್ಘಾವಧಿಯಲ್ಲಿ ಹೂಡಿಕೆಗೆ ಶೇರು ಆಗತ್ಯವಾದದ್ದು ಮತ್ತು ಅಲ್ಪಾವಧಿಯ ಹೂಡಿಕೆಗೆ ಸರ್ಕಾರಿ ಸಾಲ ಪತ್ರಗಳಲ್ಲಿ ಹೂಡುದು ಹಣ ಹೂಡಿಕೆ ಮಾಡುವುದು ಸೂಕ್ತವೆಂದು ಸಲಹೆ ನೀಡಿದರು.


ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ.ಕೆ, ಕಾರ್ಯಾಗಾರದ ಸಂಯೋಜಕ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ.ರವಿ ಎಂ.ಎನ್ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪದ್ಮನಾಭ್, IQAC ಸಂಚಾಲಕರಾದ ಡಾ.ಕುಶಾಲಪ್ಪ , ನಿರ್ವಹಣಾ ವಿಭಾಗದ ಮುಖ್ಯಸ್ಥರಾದ. ಪ್ರೊ ರಶ್ಮಿ ಹಾಗೂ ಕಾರ್ಯಾಗಾರದ ಸಂಚಾಲಕಿ ಪ್ರೊ ರಾಜೇಶ್ವರಿ ಎಚ್ ಎಸ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ವೃಂದ ಪಾಲ್ಗೊಂಡಿದ್ದರು. ಶ್ರವಣ್ ಸ್ವಾಗತಿಸಿ, ಅಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya
error: Content is protected !!