September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ನಿರ್ವಹಣಾ ಸಂಘವು ಜಂಟಿಯಾಗಿ ಹೂಡಿಕೆದಾರರ ಜಾಗೃತಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಡಿ.12 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್. ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆಯನ್ನು ಸಿ.ಪಿ.ಎಫ್ SEBI ನೋಂದಾಯಿತ ಹೂಡಿಕೆಯ ಸಲಹೆಗಾರರಾದ ಲಿಯೋ ಅಮಲ್ ಇವರು ನೆರವೇರಿಸಿದರು.

ಉದ್ಘಾಟಕರು ಕಾರ್ಯಕ್ರಮವನ್ನು ಉದ್ದೇಶಿಸಿ ನಿಮ್ಮ ಭವಿಷ್ಯದ ಯೋಜನೆಗೆ ಅನುಗುಣವಾಗಿ ಹೂಡಿಕೆಯನ್ನು ಆಯ್ದುಕೊಳ್ಳಬೇಕೆಂದು ಸಲಹೆ ನೀಡಿದರು. ಆ ಬಳಿಕ ಸ್ವಪ್ನ ಶೆಣೈ ಅವರು ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿ ದೀರ್ಘಾವಧಿಯಲ್ಲಿ ಹೂಡಿಕೆಗೆ ಶೇರು ಆಗತ್ಯವಾದದ್ದು ಮತ್ತು ಅಲ್ಪಾವಧಿಯ ಹೂಡಿಕೆಗೆ ಸರ್ಕಾರಿ ಸಾಲ ಪತ್ರಗಳಲ್ಲಿ ಹೂಡುದು ಹಣ ಹೂಡಿಕೆ ಮಾಡುವುದು ಸೂಕ್ತವೆಂದು ಸಲಹೆ ನೀಡಿದರು.


ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ.ಕೆ, ಕಾರ್ಯಾಗಾರದ ಸಂಯೋಜಕ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ.ರವಿ ಎಂ.ಎನ್ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪದ್ಮನಾಭ್, IQAC ಸಂಚಾಲಕರಾದ ಡಾ.ಕುಶಾಲಪ್ಪ , ನಿರ್ವಹಣಾ ವಿಭಾಗದ ಮುಖ್ಯಸ್ಥರಾದ. ಪ್ರೊ ರಶ್ಮಿ ಹಾಗೂ ಕಾರ್ಯಾಗಾರದ ಸಂಚಾಲಕಿ ಪ್ರೊ ರಾಜೇಶ್ವರಿ ಎಚ್ ಎಸ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ವೃಂದ ಪಾಲ್ಗೊಂಡಿದ್ದರು. ಶ್ರವಣ್ ಸ್ವಾಗತಿಸಿ, ಅಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!