25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯ ಶಾಸ್ತ್ರ ಸಂಘ , ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸಂಚಾರಿ ಪೋಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ-2023ನೇ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪಿ.ಎಸ್.ಐ ಅರ್ಜುನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಸಂಚಾರಿ ನಿಯಮಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಯಾವೆಲ್ಲ ರೀತಿಯ ಸಂಚಾರಿ ನಿಯಮಗಳಿಗೆ, ಭಾರತೀಯ ಮೋಟಾರು ವಾಹನ ಕಾಯ್ದೆ, ಇನ್ಸೂರೆನ್ಸ್ ಹೆಲ್ಮೆಟ್ ಧಾರಣೆಯ ಮಹತ್ವ, ಸಂಚಾರಿ ನಿಯಮಗಳ ಪಾಲನೆಯಿಂದ ಆಗುವ ಲಾಭಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಒಂದು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಅಂತರ ಕಡಿಮೆಯಾಗಿ ಇಲಾಖೆಯ ಬಗ್ಗೆ ಯುವ ಜನರಲ್ಲಿ ತಪ್ಪು ಪೂರ್ವಾನುಗ್ರಹ ದೂರ ಮಾಡುವ ಒಂದು ಪ್ರಾಮಾಣಿಕ ಪ್ರಯತ್ನ ಈ ಜಾಗೃತಿ ಕಾರ್ಯಕ್ರಮದ ಮೂಲಕ ಮಾಡಲಾಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಎಎಸ್‍ಐ ರಾಮಚಂದ್ರ ಇವರು ಸಾರ್ವಜನಿಕರ ಜೀವವನ್ನು ರಕ್ಷಿಸುವಲ್ಲಿ ಸಂಚಾರಿ ನಿಯಮಗಳ ಪಾಲನೆಯ ಮಹತ್ವ ಹಾಗೂ ಸಂಚಾರಿ ಪೊಲೀಸ್ ಇಲಾಖೆಯ ಪಾತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಘವ ಎನ್. ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಪ್ರಾಧ್ಯಾಪಕರು ಹಾಗೂ ಎನ್.ಎಸ್.ಎಸ್ ಸಲಹೆಗಾರರಾದ ಪ್ರೊ.ಸುಬ್ರಹ್ಮಣ್ಯ ಕೆ, ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯವರು ಉಪಸ್ಥಿತರಿದ್ದರು.

ಜಗದೀಶ್ ಪ್ರಾರ್ಥಿಸಿ, ಕು. ಪೂಜಾಶ್ರೀ ನಿರೂಪಿಸಿದರು. ಕು.ವರ್ಷಾ ಸ್ವಾಗತಿಸಿದರು, ಸಂದೇಶ್ ವಂದಿಸಿದರು.

Related posts

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಕೊಕ್ಕಡ ಗ್ರಾಮದಲ್ಲಿ ನಿಲ್ಲದ ಕಾಡಾನೆ ದಾಂಧಲೆ: ಬೆಳೆ ನಾಶ-ಮನೆ ಬಳಿ ನಿಲ್ಲಿಸಿದ್ದ ಕಾರು-ಸ್ಕೂಟಿ ಮೇಲೆ ದಾಳಿ-ಜನರಲ್ಲಿ ಹೆಚ್ಚಿದ ಆತಂಕ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!