38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

ಗುರಿಪಳ್ಳ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಎಂಬಲ್ಲಿ ಇರುವ ತೀರಾ ಹಳೆಯದಾದ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು ಕುಸಿಯುವ ಹಂತದಲ್ಲಿದೆ. ಈಗಾಗಲೆ ಎಚ್ಚರಿಕೆ ಬ್ಯಾನರ್ ಕೂಡ ಲೋಕೋಪಯೋಗಿ ಇಲಾಖೆಯಿಂದ ಹಾಕಲಾಗಿರುತ್ತದೆ.

ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ರವರು ಬೇಟಿ ನೀಡಿ ಬಿರುಕು ಬಿಟ್ಟ ಸೇತುವೆಯನ್ನು ಸ್ಥಳೀಯರೊಂದಿಗೆ ಪರಿಶೀಲಿಸಿ. ಸೇತುವೆ ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿದು ಬೀಳುವ ಸಂಭವದಲ್ಲಿರುವುದನ್ನು ಗಮನಿಸಿದ ಇವರು ಆ ಕೂಡಲೇ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಸೇತುವೆಯ ಬಗ್ಗೆ ಸಮಗ್ರ ವರದಿಯನ್ನು ತಯಾರುಮಾಡಿ ಕೂಡಲೆ ಹೊಸ ಸೇತುವೆ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಂತರ ಮಾತನಾಡಿ ಹೊಸ ಸೇತುವೆಯನ್ನು ಆದಷ್ಟು ಶೀಘ್ರದಲ್ಲಿ ನಿರ್ಮಿಸುವ ಬಗ್ಗೆ ಸಚಿವರ ಜೊತೆ ಮಾತನಾಡಿ ಸರಕಾರದಿಂದ ಮಂಜೂರುಗೊಳಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಗ್ರಾ.ಪಂ ಸದಸ್ಯರಾದ ನೀಲಯ್ಯ ಪೂಜಾರಿ, ಉಜಿರೆ ಗ್ರಾ.ಪಂ. ಸದಸ್ಯರಾದ ಅನಿಲ್, ನಾಣ್ಯಪ್ಪ ಪೂಜಾರಿ, ಪ್ರವೀಣ್ ಹಳ್ಳಿಮನೆ, ಯಶೋಧರ ಗೌಡ, ರಾಧಾಕೃಷ್ಣ ಶರ್ಮಾ ಗುರಿಪಳ್ಳ, ರತ್ನಾಕರ ಪೂಜಾರಿ, ಪ್ರಸಾದ್ ಕುಮಾರ್, ಸಂದೀಪ್ ಕೊಡೆಕ್ಕಲ್ ಹಾಗೂ ಊರವರು ಉಪಸ್ಥಿತರಿದ್ದರು

Related posts

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya
error: Content is protected !!