26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

ಗುರಿಪಳ್ಳ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಎಂಬಲ್ಲಿ ಇರುವ ತೀರಾ ಹಳೆಯದಾದ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು ಕುಸಿಯುವ ಹಂತದಲ್ಲಿದೆ. ಈಗಾಗಲೆ ಎಚ್ಚರಿಕೆ ಬ್ಯಾನರ್ ಕೂಡ ಲೋಕೋಪಯೋಗಿ ಇಲಾಖೆಯಿಂದ ಹಾಕಲಾಗಿರುತ್ತದೆ.

ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ರವರು ಬೇಟಿ ನೀಡಿ ಬಿರುಕು ಬಿಟ್ಟ ಸೇತುವೆಯನ್ನು ಸ್ಥಳೀಯರೊಂದಿಗೆ ಪರಿಶೀಲಿಸಿ. ಸೇತುವೆ ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿದು ಬೀಳುವ ಸಂಭವದಲ್ಲಿರುವುದನ್ನು ಗಮನಿಸಿದ ಇವರು ಆ ಕೂಡಲೇ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಸೇತುವೆಯ ಬಗ್ಗೆ ಸಮಗ್ರ ವರದಿಯನ್ನು ತಯಾರುಮಾಡಿ ಕೂಡಲೆ ಹೊಸ ಸೇತುವೆ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಂತರ ಮಾತನಾಡಿ ಹೊಸ ಸೇತುವೆಯನ್ನು ಆದಷ್ಟು ಶೀಘ್ರದಲ್ಲಿ ನಿರ್ಮಿಸುವ ಬಗ್ಗೆ ಸಚಿವರ ಜೊತೆ ಮಾತನಾಡಿ ಸರಕಾರದಿಂದ ಮಂಜೂರುಗೊಳಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಗ್ರಾ.ಪಂ ಸದಸ್ಯರಾದ ನೀಲಯ್ಯ ಪೂಜಾರಿ, ಉಜಿರೆ ಗ್ರಾ.ಪಂ. ಸದಸ್ಯರಾದ ಅನಿಲ್, ನಾಣ್ಯಪ್ಪ ಪೂಜಾರಿ, ಪ್ರವೀಣ್ ಹಳ್ಳಿಮನೆ, ಯಶೋಧರ ಗೌಡ, ರಾಧಾಕೃಷ್ಣ ಶರ್ಮಾ ಗುರಿಪಳ್ಳ, ರತ್ನಾಕರ ಪೂಜಾರಿ, ಪ್ರಸಾದ್ ಕುಮಾರ್, ಸಂದೀಪ್ ಕೊಡೆಕ್ಕಲ್ ಹಾಗೂ ಊರವರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!