23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

ಗುರಿಪಳ್ಳ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಎಂಬಲ್ಲಿ ಇರುವ ತೀರಾ ಹಳೆಯದಾದ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು ಕುಸಿಯುವ ಹಂತದಲ್ಲಿದೆ. ಈಗಾಗಲೆ ಎಚ್ಚರಿಕೆ ಬ್ಯಾನರ್ ಕೂಡ ಲೋಕೋಪಯೋಗಿ ಇಲಾಖೆಯಿಂದ ಹಾಕಲಾಗಿರುತ್ತದೆ.

ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ರವರು ಬೇಟಿ ನೀಡಿ ಬಿರುಕು ಬಿಟ್ಟ ಸೇತುವೆಯನ್ನು ಸ್ಥಳೀಯರೊಂದಿಗೆ ಪರಿಶೀಲಿಸಿ. ಸೇತುವೆ ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿದು ಬೀಳುವ ಸಂಭವದಲ್ಲಿರುವುದನ್ನು ಗಮನಿಸಿದ ಇವರು ಆ ಕೂಡಲೇ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಸೇತುವೆಯ ಬಗ್ಗೆ ಸಮಗ್ರ ವರದಿಯನ್ನು ತಯಾರುಮಾಡಿ ಕೂಡಲೆ ಹೊಸ ಸೇತುವೆ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಂತರ ಮಾತನಾಡಿ ಹೊಸ ಸೇತುವೆಯನ್ನು ಆದಷ್ಟು ಶೀಘ್ರದಲ್ಲಿ ನಿರ್ಮಿಸುವ ಬಗ್ಗೆ ಸಚಿವರ ಜೊತೆ ಮಾತನಾಡಿ ಸರಕಾರದಿಂದ ಮಂಜೂರುಗೊಳಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಗ್ರಾ.ಪಂ ಸದಸ್ಯರಾದ ನೀಲಯ್ಯ ಪೂಜಾರಿ, ಉಜಿರೆ ಗ್ರಾ.ಪಂ. ಸದಸ್ಯರಾದ ಅನಿಲ್, ನಾಣ್ಯಪ್ಪ ಪೂಜಾರಿ, ಪ್ರವೀಣ್ ಹಳ್ಳಿಮನೆ, ಯಶೋಧರ ಗೌಡ, ರಾಧಾಕೃಷ್ಣ ಶರ್ಮಾ ಗುರಿಪಳ್ಳ, ರತ್ನಾಕರ ಪೂಜಾರಿ, ಪ್ರಸಾದ್ ಕುಮಾರ್, ಸಂದೀಪ್ ಕೊಡೆಕ್ಕಲ್ ಹಾಗೂ ಊರವರು ಉಪಸ್ಥಿತರಿದ್ದರು

Related posts

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!