September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

ಗುರಿಪಳ್ಳ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಎಂಬಲ್ಲಿ ಇರುವ ತೀರಾ ಹಳೆಯದಾದ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು ಕುಸಿಯುವ ಹಂತದಲ್ಲಿದೆ. ಈಗಾಗಲೆ ಎಚ್ಚರಿಕೆ ಬ್ಯಾನರ್ ಕೂಡ ಲೋಕೋಪಯೋಗಿ ಇಲಾಖೆಯಿಂದ ಹಾಕಲಾಗಿರುತ್ತದೆ.

ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ರವರು ಬೇಟಿ ನೀಡಿ ಬಿರುಕು ಬಿಟ್ಟ ಸೇತುವೆಯನ್ನು ಸ್ಥಳೀಯರೊಂದಿಗೆ ಪರಿಶೀಲಿಸಿ. ಸೇತುವೆ ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿದು ಬೀಳುವ ಸಂಭವದಲ್ಲಿರುವುದನ್ನು ಗಮನಿಸಿದ ಇವರು ಆ ಕೂಡಲೇ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಸೇತುವೆಯ ಬಗ್ಗೆ ಸಮಗ್ರ ವರದಿಯನ್ನು ತಯಾರುಮಾಡಿ ಕೂಡಲೆ ಹೊಸ ಸೇತುವೆ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಂತರ ಮಾತನಾಡಿ ಹೊಸ ಸೇತುವೆಯನ್ನು ಆದಷ್ಟು ಶೀಘ್ರದಲ್ಲಿ ನಿರ್ಮಿಸುವ ಬಗ್ಗೆ ಸಚಿವರ ಜೊತೆ ಮಾತನಾಡಿ ಸರಕಾರದಿಂದ ಮಂಜೂರುಗೊಳಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಗ್ರಾ.ಪಂ ಸದಸ್ಯರಾದ ನೀಲಯ್ಯ ಪೂಜಾರಿ, ಉಜಿರೆ ಗ್ರಾ.ಪಂ. ಸದಸ್ಯರಾದ ಅನಿಲ್, ನಾಣ್ಯಪ್ಪ ಪೂಜಾರಿ, ಪ್ರವೀಣ್ ಹಳ್ಳಿಮನೆ, ಯಶೋಧರ ಗೌಡ, ರಾಧಾಕೃಷ್ಣ ಶರ್ಮಾ ಗುರಿಪಳ್ಳ, ರತ್ನಾಕರ ಪೂಜಾರಿ, ಪ್ರಸಾದ್ ಕುಮಾರ್, ಸಂದೀಪ್ ಕೊಡೆಕ್ಕಲ್ ಹಾಗೂ ಊರವರು ಉಪಸ್ಥಿತರಿದ್ದರು

Related posts

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya
error: Content is protected !!