22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

ಗುರಿಪಳ್ಳ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಎಂಬಲ್ಲಿ ಇರುವ ತೀರಾ ಹಳೆಯದಾದ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು ಕುಸಿಯುವ ಹಂತದಲ್ಲಿದೆ. ಈಗಾಗಲೆ ಎಚ್ಚರಿಕೆ ಬ್ಯಾನರ್ ಕೂಡ ಲೋಕೋಪಯೋಗಿ ಇಲಾಖೆಯಿಂದ ಹಾಕಲಾಗಿರುತ್ತದೆ.

ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ರವರು ಬೇಟಿ ನೀಡಿ ಬಿರುಕು ಬಿಟ್ಟ ಸೇತುವೆಯನ್ನು ಸ್ಥಳೀಯರೊಂದಿಗೆ ಪರಿಶೀಲಿಸಿ. ಸೇತುವೆ ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿದು ಬೀಳುವ ಸಂಭವದಲ್ಲಿರುವುದನ್ನು ಗಮನಿಸಿದ ಇವರು ಆ ಕೂಡಲೇ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಸೇತುವೆಯ ಬಗ್ಗೆ ಸಮಗ್ರ ವರದಿಯನ್ನು ತಯಾರುಮಾಡಿ ಕೂಡಲೆ ಹೊಸ ಸೇತುವೆ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಂತರ ಮಾತನಾಡಿ ಹೊಸ ಸೇತುವೆಯನ್ನು ಆದಷ್ಟು ಶೀಘ್ರದಲ್ಲಿ ನಿರ್ಮಿಸುವ ಬಗ್ಗೆ ಸಚಿವರ ಜೊತೆ ಮಾತನಾಡಿ ಸರಕಾರದಿಂದ ಮಂಜೂರುಗೊಳಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಗ್ರಾ.ಪಂ ಸದಸ್ಯರಾದ ನೀಲಯ್ಯ ಪೂಜಾರಿ, ಉಜಿರೆ ಗ್ರಾ.ಪಂ. ಸದಸ್ಯರಾದ ಅನಿಲ್, ನಾಣ್ಯಪ್ಪ ಪೂಜಾರಿ, ಪ್ರವೀಣ್ ಹಳ್ಳಿಮನೆ, ಯಶೋಧರ ಗೌಡ, ರಾಧಾಕೃಷ್ಣ ಶರ್ಮಾ ಗುರಿಪಳ್ಳ, ರತ್ನಾಕರ ಪೂಜಾರಿ, ಪ್ರಸಾದ್ ಕುಮಾರ್, ಸಂದೀಪ್ ಕೊಡೆಕ್ಕಲ್ ಹಾಗೂ ಊರವರು ಉಪಸ್ಥಿತರಿದ್ದರು

Related posts

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya
error: Content is protected !!