September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

ಕ್ರೀಡೆ ದೇಹಕ್ಕೆ ಮನಸಿಗೆ ಖುಷಿ ಕೊಡುವುದರ ಜೊತೆಗೆ ಜೀವನ ಮೌಲ್ಯಗಳನ್ನು ಕಲಿಸಿ ಕೊಡುತ್ತದೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿ ಬದುಕಿಗೆ ಶಕ್ತಿ ತುಂಬಿ ಕೊಡುತ್ತದೆ ಎಂದು ನಾವುರದ ಆರೋಗ್ಯ ಕ್ಲಿನಿಕ್ ನ ಜನಪ್ರಿಯ ವೈದ್ಯರಾದ ಪ್ರದೀಪ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ನಡ ಸ.ಪ.ಪೂ. ಕಾಲೇಜು ಇಲ್ಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಅಜಿತ್ ಕುಮಾರ್ ಆರಿಗರು ಧ್ವಜಾರೋಹಣಗೈದರು. ಪ್ರಾಂಶುಪಾಲರಾದ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಉಪನ್ಯಾಸಕರಾದ ಮೋಹನ ಗೌಡರು ನಿರೂಪಿಸಿದ ಕಾರ್ಯಕ್ರಮದಲ್ಲಿ ಲಿಲ್ಲಿ ಸ್ವಾಗತಿಸಿ, ಶಿಲ್ಪಾ ಧನ್ಯವಾದವಿತ್ತರು.

ಕ್ರೀಡಾ ಮಾರ್ಗದರ್ಶಿಯಾದ ವಸಂತಿ ತಂಡದ ನಾಯಕರಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಅಚ್ಚುಕಟ್ಟಾಗಿ ಕ್ರೀಡೆಗಳನ್ನು ನಡೆಸಿಕೊಟ್ಟರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya
error: Content is protected !!