24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ಡಿ.13 ರಂದು ಆಗಮಿಸಿದ ಪ್ರಧಾನಮಂತ್ರಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥವನ್ನು ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಆರತಿಯನ್ನು ಬೆಳಗಿಸುವ ಮೂಲಕ ಸ್ವಾಗತಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಸವಿತಾರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ನೋಡೆಲ್ ಅಧಿಕಾರಿಯಾದ ಬ್ಯಾಂಕ್ ಆಪ್ ಬರೋಡಾದ ವ್ಯವಸ್ಥಾಪಕ ವಿನಾಯಕ್ ರವರು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸವಲತ್ತಿನ ಬಗ್ಗೆ ವಿವರಿಸಿದರು.ಎಸ್. ಹೆಚ್. ಜಿ ಯೋಜನೆಯಡಿಯಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಮಂಜೂರಾದ ನೇರಸಾಲದ ಆದೇಶ ಪತ್ರವನ್ನು ಶ್ರೀದೇವಿ ಸ್ತ್ರೀಶಕ್ತಿ ಸ್ವಸಹಾಯ ಸಂಘ ಮೇಲಂತಬೆಟ್ಟು ಹಾಗೂ ಶ್ರೀದುರ್ಗಾ ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಗುತ್ತಿನಬೈಲು ಸವಣಾಲು ಇವರಿಗೆ ವಿತರಿಸಲಾಯಿತು. ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಯಡಿಯಲ್ಲಿ ಸಹಾಯಧನ ಪಡೆದು ಆರ್ಥಿಕತೆಯಲ್ಲಿ ಬಲವರ್ಧನೆಯಾದ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಗುರುತಿಸಿ ಸರಕಾರಾದ ಯೋಜನೆಯಾದ ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಚಿತ ಗ್ಯಾಸ್ ಮಂಜೂರುಗೊಳಿಸಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವರ್ಗದವರಿಗೂ ಕೇಂದ್ರ ಸರಕಾರದಿಂದ ಸಿಗುವಂತಹ ಮುದ್ರಾ ಯೋಜನೆ, ಪಿಎಂ ಕಿಸಾನ್ ಯೋಜನೆ ಫಸಲ್ ಭೀಮಾ ಯೋಜನೆಯಡಿಯಲ್ಲಿ ಸೌಲಭ್ಯಗಳನ್ನು ಪಡೆಯುವಲ್ಲಿ ಪ್ರೇರಣೆಯನ್ನು ನೀಡುವುದರ ಜೊತೆಗೆ ಸರಕಾರದಿಂದ ಕಾಲಕಾಲಕ್ಕೆ ಸಿಗುವೆ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳನ್ನು ಗ್ರಾಮಸ್ಥರೆಲ್ಲರೂ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಗೀತಾ ಆರ್. ಸಾಲಿಯಾನ್ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾದ್ಯಕ್ಷರಾದ ಗಣೇಶ್ ಭಂಡಾರಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದವಿತ್ತರು.

Related posts

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya
error: Content is protected !!