ಸಾವ್ಯ: ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ ಡಿ.15 ರಂದು ಶಾಲಾ ವಠಾರದಲ್ಲಿ ಜರುಗಲಿದೆ.
ಕಾರ್ಯಕ್ರಮದ ಘನ ಉಪಸ್ಥಿತಿ ಸಭಾಧ್ಯಕ್ಷರು ಯುಟಿ ಖಾದರ್ ಫರೀದ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ.
ಗೌರವ ಉಪಸ್ಥಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್ ಮಧು ಬಂಗಾರಪ್ಪ ಹಾಗೂ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಸಂಜೆ ಅಂಗನವಾಡಿ ವಿದ್ಯಾರ್ಥಿಗಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.00 ಗಂಟೆಗೆ ಸುನಿಲ್ ಹೆಗ್ಡೆ ಕೊಡಿಯೆಲ್ ಮನೆ ಸಾವ್ಯ ಇವರ ಪ್ರಾಯೋಜಕತ್ವದಲ್ಲಿ ಚೈತನ್ಯ ಕಲಾವಿದರು ಬೈಲೂರು ಇವರಿಂದ ಪಿರ ಪೋಂಡುಗೆ ತುಳು ಹಾಸ್ಯಮಯ ನಾಟಕ ನಡೆಯಲಿದೆ.