27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

ಬೆಳ್ತಂಗಡಿ: ಕಾಫಿನಾಡಿಗೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.

ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರು ಬರೋದನ್ನು ನಿರ್ಬಂಧಿಸಲಾಗಿದೆ. ಡಿ. 24, 25, 26ರಂದು ಕಾಫಿನಾಡು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಇರುವ ಹಿನ್ನೆಲೆ ಡಿ.26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಇನ್ನು ಗಿರಿ ಭಾಗದಲ್ಲಿ ಕ್ರಿಸ್‌ ಮಸ್‌ ಸೆಲೆಬ್ರೇಷನ್ ಗೂ ಅವಕಾಶವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!