24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

ಬೆಳ್ತಂಗಡಿ: ಕಾಫಿನಾಡಿಗೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.

ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರು ಬರೋದನ್ನು ನಿರ್ಬಂಧಿಸಲಾಗಿದೆ. ಡಿ. 24, 25, 26ರಂದು ಕಾಫಿನಾಡು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಇರುವ ಹಿನ್ನೆಲೆ ಡಿ.26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಇನ್ನು ಗಿರಿ ಭಾಗದಲ್ಲಿ ಕ್ರಿಸ್‌ ಮಸ್‌ ಸೆಲೆಬ್ರೇಷನ್ ಗೂ ಅವಕಾಶವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!