23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

ಬೆಳ್ತಂಗಡಿ: ಕಾಫಿನಾಡಿಗೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.

ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರು ಬರೋದನ್ನು ನಿರ್ಬಂಧಿಸಲಾಗಿದೆ. ಡಿ. 24, 25, 26ರಂದು ಕಾಫಿನಾಡು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಇರುವ ಹಿನ್ನೆಲೆ ಡಿ.26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಇನ್ನು ಗಿರಿ ಭಾಗದಲ್ಲಿ ಕ್ರಿಸ್‌ ಮಸ್‌ ಸೆಲೆಬ್ರೇಷನ್ ಗೂ ಅವಕಾಶವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.

Related posts

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya
error: Content is protected !!