July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

ಬೆಳ್ತಂಗಡಿ: ಕಾಫಿನಾಡಿಗೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.

ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರು ಬರೋದನ್ನು ನಿರ್ಬಂಧಿಸಲಾಗಿದೆ. ಡಿ. 24, 25, 26ರಂದು ಕಾಫಿನಾಡು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಇರುವ ಹಿನ್ನೆಲೆ ಡಿ.26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಇನ್ನು ಗಿರಿ ಭಾಗದಲ್ಲಿ ಕ್ರಿಸ್‌ ಮಸ್‌ ಸೆಲೆಬ್ರೇಷನ್ ಗೂ ಅವಕಾಶವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya
error: Content is protected !!