September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

ಪಡಂಗಡಿ : ಮಕ್ಕಳ ಸ್ಥಿತಿಗತಿ, ಅವರುಗಳ ಅಭಿವೃದ್ಧಿ ಹಾಗೂ ಸಂವಿಧಾನಾತ್ಮಕವಾಗಿ ಒದಗಿಸಿರುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಲು ಮಕ್ಕಳ ಗ್ರಾಮ ಸಭೆಯನ್ನು ಡಿ. 14 ರಂದು ಪಡಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಕಾಳಜಿಯ ಬಗ್ಗೆ ಮಕ್ಕಳಿಗೆ ಸಮುದಾಯ ಆರೋಗ್ಯ ಅಧಿಕಾರಿ ಸಂಧ್ಯಾ ಹಾಗೂ ಮಕ್ಕಳ ರಕ್ಷಣೆಯ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಪ್ರೇಮ ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಕುರಿತು, ಮಕ್ಕಳ ಬೌದ್ದಿಕ ಬೆಳವಣಿಗೆಗೆ ಆಟ ಪಾಠಗಳ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸುವ ಬಗ್ಗೆ, ಪ್ರತಿ 3 ವರ್ಷದಿಂದ 6 ವರ್ಷದ ಎಲ್ಲಾ ಮಕ್ಕಳು ಅಂಗನವಾಡಿ ಹಾಗೂ ಶಾಲೆಗಳಲ್ಲಿ ದಾಖಲಾತಿ ಶಿಕ್ಷಣವನ್ನು ಪ್ರಾರಂಭಿಸುವ ಕುರಿತು, ಜೀತಪದ್ದತಿ ಹಾಗೂ ಕೃಷಿ ಕಾರ್ಮಿಕ ವೃತ್ತಿಯಲ್ಲಿ ಮಕ್ಕಳನ್ನು ತೊಡಗಿಸುವವರ ವಿರುದ್ಧ ಜಾಗೃತಿ ಮೂಡಿಸುವ ಬಗ್ಗೆ, ಹೆಣ್ಣು ಮಕ್ಕಳ ಪೋಷಣೆ ಹಾಗೂ ರಕ್ಷಣೆಯ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ವಸಂತ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ, ಉಪಾಧ್ಯಕ್ಷರಾದ ಶ್ರೀಮತಿ ವಸಂತಿ, ಪಂಚಾಯತ್ ಕಾರ್ಯದರ್ಶಿ ತಾರಾನಾಥ ನಾಯ್ಕ ಕೆ , ಪಂಚಾಯತ್ ಸದಸ್ಯರುಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರುಗಳು , ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya
error: Content is protected !!