24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ‌ ಜಾತ್ರಾಮಹೋತ್ಸವದ ಚಪ್ಪರ ಮುಹೂರ್ತ ಹಾಗೂ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸುವ ಕೆರೆಯ ಜಾಗದ ಮುಹೂರ್ತ ಕಾರ್ಯಕ್ರಮ ಡಿ 15 ರಂದು ಜರಗಿತು.

ಈ ಸಂರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು . ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕೆರೆ ನಿರ್ಮಿಸಲು ಜಾಗವನ್ನು ದಾನವಾಗಿ ನೀಡಿದ ಜಾಗದ ಮಾಲಕರು ವಸಂತಿ ಬಿ ಶೆಟ್ಟಿ ಮತ್ತು ಮಕ್ಕಳು ತುಂಗಾ ಆಸ್ಪತ್ರೆ ಮುಂಬಾಯಿ, ಕುವೆಟ್ಟು ಗ್ರಾ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಜಯರಾಮ್ ಶೆಟ್ಟಿ ಪಡಂಗಡಿ, ಜಯಪ್ರಕಾಶ್ ಸಂಪಿಗೆತ್ತಾಯ ಬಳ್ಳಮಂಜ, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya
error: Content is protected !!