ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಕೆನರಾ ಬ್ಯಾಂಕ್ ಪದ್ಮುಂಜ ಇದರ ಸಹಯೋಗದೊಂದಿಗೆ ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರು ನೆರವೇರಿಸಿದರು.
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಕೀಲರು ಉದಯ್ ಕುಮಾರ್ ಬಿ. ಕೆ ಯವರು ವಿವಿಧ ಯೋಜನೆಗಳ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತ ಸಂಯೋಜಕಿ ಉಷಾ ರವರು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನ ದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪದ್ಮುಂಜ ಕೆನರಾ ಬ್ಯಾಂಕ್ ಮೆನೇಜರ್ ದಿಪೇಶ್ , ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪವತಿ ಬರಮೇಲು, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ, ಮಾಜಿ ಉಪಾಧ್ಯಕ್ಷ ಗಂಗಾಧರ ಗೌಡ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಾರ್ಯಕ್ರಮದ ಪ್ರಭಾರಿ ರಕ್ಷಿತ್ ಪಣೆಕ್ಕರ ಹಾಗೂ ಸರ್ವ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ , ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಸಲು ಗ್ರಾಮಸ್ಥರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಮಗ್ರ ಕೃಷಿಯಲ್ಲಿ ರಾಷ್ಟ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮೊಗ್ರು ಗ್ರಾಮದ ದೇವಿಪ್ರಸಾದ್ ಗೌಡ ಕಡಮ್ಮಜೆ ಇವರಿಗೆ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿಯನ್ನು ಸನ್ಮಾನಿಸಲಾಯಿತು ಹಾಗೂ ಸಂಜೀವಿನಿ ಒಕ್ಕೂಟದ ಫಲಾನುಭವಿಗಳಾದ ಶ್ರೀಮತಿ ರೂಪ ವಿಶ್ವಕರ್ಮ, ಶ್ರೀಮತಿ ಶೋಭಾಹರೀಶ್ ತಾರಕೆರೆ ,ಶ್ರೀಮತಿ ಗೀತ , ಮುದ್ರಾ ಯೋಜನೆಯ ಫಲಾನುಭವಿ ಸತ್ಯಪ್ರಕಾಶ್ ಉಂತನಾಜೆ ಹಾಗೂ ಪೋಷನ್ ಯೋಜನೆ ಅಡಿಯಲ್ಲಿ ಅಂಗನವಾಡಿ ಮಕ್ಕಳಾದ ಚೈತನ್ಯ, ಮನ್ವಿತ್ ಇವರನ್ನು ಸನ್ಮಾನಿಸಲಾಯಿತು.











