23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಕೆನರಾ ಬ್ಯಾಂಕ್ ಪದ್ಮುಂಜ ಇದರ ಸಹಯೋಗದೊಂದಿಗೆ ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರು ನೆರವೇರಿಸಿದರು.

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಕೀಲರು ಉದಯ್ ಕುಮಾರ್ ಬಿ. ಕೆ ಯವರು ವಿವಿಧ ಯೋಜನೆಗಳ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತ ಸಂಯೋಜಕಿ ಉಷಾ ರವರು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನ ದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪದ್ಮುಂಜ ಕೆನರಾ ಬ್ಯಾಂಕ್ ಮೆನೇಜರ್ ದಿಪೇಶ್ , ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪವತಿ ಬರಮೇಲು, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ, ಮಾಜಿ ಉಪಾಧ್ಯಕ್ಷ ಗಂಗಾಧರ ಗೌಡ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಾರ್ಯಕ್ರಮದ ಪ್ರಭಾರಿ ರಕ್ಷಿತ್ ಪಣೆಕ್ಕರ ಹಾಗೂ ಸರ್ವ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ , ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಸಲು ಗ್ರಾಮಸ್ಥರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಮಗ್ರ ಕೃಷಿಯಲ್ಲಿ ರಾಷ್ಟ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮೊಗ್ರು ಗ್ರಾಮದ ದೇವಿಪ್ರಸಾದ್ ಗೌಡ ಕಡಮ್ಮಜೆ ಇವರಿಗೆ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿಯನ್ನು ಸನ್ಮಾನಿಸಲಾಯಿತು ಹಾಗೂ ಸಂಜೀವಿನಿ ಒಕ್ಕೂಟದ ಫಲಾನುಭವಿಗಳಾದ ಶ್ರೀಮತಿ ರೂಪ ವಿಶ್ವಕರ್ಮ, ಶ್ರೀಮತಿ ಶೋಭಾಹರೀಶ್ ತಾರಕೆರೆ ,ಶ್ರೀಮತಿ ಗೀತ , ಮುದ್ರಾ ಯೋಜನೆಯ ಫಲಾನುಭವಿ ಸತ್ಯಪ್ರಕಾಶ್ ಉಂತನಾಜೆ ಹಾಗೂ ಪೋಷನ್ ಯೋಜನೆ ಅಡಿಯಲ್ಲಿ ಅಂಗನವಾಡಿ ಮಕ್ಕಳಾದ ಚೈತನ್ಯ, ಮನ್ವಿತ್ ಇವರನ್ನು ಸನ್ಮಾನಿಸಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

Suddi Udaya
error: Content is protected !!