23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಇಂದಬೆಟ್ಟು : ಕೇಂದ್ರ ಸರ್ಕಾರದ ಯೋಜನೆಗಳು ಕಚೇರಿಗಳಿಂದ ಹೊರಗೆ ಬಂದು ಫಲಾನುಭವಿಗಳನ್ನು ತಲುಪುವುದು ಮಾತ್ರವಲ್ಲ, ಅವರ ಮನೆಯ ಕದ ತಟ್ಟಬೇಕು ಎನ್ನುವ ಅಚಲ ಗುರಿಯೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಬೆಳ್ತಂಗಡಿ ಆರ್ಥಿಕ ಸಮಾಲೋಚಕರು ಶ್ರೀಮತಿ ಉಷಾ ನಾಯಕ್ ನೀಡಿದರು ಮತ್ತು ಯೋಜನೆಗಳ ಬಗ್ಗೆ ಜನರ ಅಹವಾಲುಗಳನ್ನು ಪಡೆದರು. ಕೆನರಾ ಬ್ಯಾಂಕ್ ಬೆಳ್ತಂಗಡಿಯ ಮುಖ್ಯ ಪ್ರಬಂಧಕರಾದ ಅಜಯ್ ರವರು ಮಾಹಿತಿ ನೀಡಿದರು ಮತ್ತು ಬಂಗಾಡಿ ಶಾಖೆಯ ಬಗ್ಗೆ ಜನರ ಸಮಸ್ಯೆಗಳನ್ನು ಆಲಿಸಿದರು ಮತ್ತು ಸಮಸ್ಯೆಯನ್ನು ಅದಷ್ಟು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿಯಾಗಿ ಬದುಕು ನಡೆಸುತ್ತಿರುವ ಇಬ್ಬರು ಮಹಿಳಾ ಫಲಾನುಭವಿಗಳು, ಇಬ್ಬರು ಕೃಷಿಕರು ಹಾಗೂ ಪೋಷನ್ ಕಾರ್ಯಕ್ರಮದಡಿ ಇಂದಬೆಟ್ಟುವಿನ 7 ಅಂಗನವಾಡಿಗಳ ತಲಾ ಇಬ್ಬರು ಮಕ್ಕಳನ್ನು ಗುರುತಿಸಿ ಗೌರವಿಸಲಾಯಿತು. ವಿಕಸಿತ ಯಾತ್ರೆಯ ರಥದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ LED ಟಿವಿಯಲ್ಲಿ ಬಿತ್ತರಿಸಲಾಯಿತು ಮತ್ತು ಪ್ರತಿಜ್ಞೆ ಭೋದಿಸಲಾಯಿತು. ಹೆಚ್.ಪಿ ಗ್ಯಾಸ್ ಏಜೆನ್ಸಿ ಉಜಿರೆ ಇವರು ಉಜ್ವಲ ಯೋಜನೆಯಡಿ ಫಲಾನುಭವಿಗಳ ನೋಂದಣಿ ಮಾಡಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ಅನಂದ ಅಡಿಲು ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು,

ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಶ್ರೀಮತಿ ಸುಮಿತ್ರಾ, ಶ್ರೀಮತಿ ಹರೀಣಾಕ್ಷಿ, ಶ್ರೀಮತಿ ಜಯಂತಿ, ವೀರಪ್ಪ ಮೊಯ್ಲಿ, ಪಂ. ಕಾರ್ಯದರ್ಶಿ ಗಿರಿಯಪ್ಪ ಗೌಡ ಮತ್ತು ಸಿಬ್ಬಂದಿ ವರ್ಗದವರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಂಡರು.

Related posts

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!