ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪಡಂಗಡಿ: ವಿಕಾಸಿತ ಭಾರತ ಸಂಕಲ್ಪ ಯಾತ್ರೆಯು ಪಡಂಗಡಿ ಗ್ರಾಮ‌ ಪಂಚಾಯತ್ ಗೆ ಆಗಮಿಸಿದಾಗ ಬಹಳ ಸಂಭ್ರಮದಿಂದ ಪೂರ್ಣ ಕುಂಭ ಮತ್ತು ಚೆಂಡೆಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೆನೇಜರ್ ಪದ್ಮನಾಭ ನಾಯಕ್ ಉದ್ಘಾಟಿಸಿದರು.

ವೇದಿಕೆಯಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಬಾನು, ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಕಾರ್ಯದರ್ಶಿ ತಾರನಾಥ ನಾಯಕ್, ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಾವಯವ ಕೃಷಿಕ ಸುಬ್ರಮಣ್ಯ ಭಟ್ ,ವಸಂತಿ ಶೆಟ್ಟಿ ಪಾಲ್ತ್ಯಾರ್ ,ಪೋಷಣ್ ಯೋಜನೆ ಅಡಿಯಲ್ಲಿ ನಿಕಿಲ್, ಶ್ರೇಷ್ಟ ,ವೈಶಿಕ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಪ್ರಭಾರಿ ದಿನಕರ ಕುಲಾಲ್ , ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗ ವಹಿಸಿದ್ದರು.

Leave a Comment

error: Content is protected !!