22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

ಪಡಂಗಡಿ: ವಿಕಾಸಿತ ಭಾರತ ಸಂಕಲ್ಪ ಯಾತ್ರೆಯು ಪಡಂಗಡಿ ಗ್ರಾಮ‌ ಪಂಚಾಯತ್ ಗೆ ಆಗಮಿಸಿದಾಗ ಬಹಳ ಸಂಭ್ರಮದಿಂದ ಪೂರ್ಣ ಕುಂಭ ಮತ್ತು ಚೆಂಡೆಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೆನೇಜರ್ ಪದ್ಮನಾಭ ನಾಯಕ್ ಉದ್ಘಾಟಿಸಿದರು.

ವೇದಿಕೆಯಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಬಾನು, ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಕಾರ್ಯದರ್ಶಿ ತಾರನಾಥ ನಾಯಕ್, ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಾವಯವ ಕೃಷಿಕ ಸುಬ್ರಮಣ್ಯ ಭಟ್ ,ವಸಂತಿ ಶೆಟ್ಟಿ ಪಾಲ್ತ್ಯಾರ್ ,ಪೋಷಣ್ ಯೋಜನೆ ಅಡಿಯಲ್ಲಿ ನಿಕಿಲ್, ಶ್ರೇಷ್ಟ ,ವೈಶಿಕ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಪ್ರಭಾರಿ ದಿನಕರ ಕುಲಾಲ್ , ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗ ವಹಿಸಿದ್ದರು.

Related posts

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!