April 1, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

ಉಜಿರೆ: “ಸೋತಾಗ ಗೆದ್ದವನನ್ನು ಪ್ರಶಂಸಿಸಿ, ಅವರಿಂದ ಗೆಲುವಿನ ಸಲಹೆಗಳನ್ನು ಕೇಳುವುದು ನಮ್ಮ ಮುಂದಿನ ಗೆಲುವಿನ ಸಾಧನ” ಎಂದು ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಹೇಳಿದರು.

ಇವರು ಡಿ 15 ರಂದು ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ, ಎಸ್.ಡಿ.ಎಮ್ ಸೆಕೆಂಡರಿ ಶಾಲೆ ಉಜಿರೆ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (state), ಉಜಿರೆ ವಿದ್ಯಾರ್ಥಿಗಳಿಗೆ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ‘ವಾರ್ಷಿಕ ಕ್ರೀಡೋತ್ಸವ’ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಹೆಚ್ಚಿಸುವುದು ಉತ್ತಮ” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹೇಳಿದರು.

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಕೆ. ಜಿ, ಸುರೇಶ್, ವಿದ್ಯಾಲಕ್ಷ್ಮಿ ಹಾಗೂ ಎಸ್.ಡಿ.ಎಮ್ ಪಿ.ಡಿ ರಮೇಶ್ ಆಸಿನರಾಗಿದ್ದರು.

ಎಸ್.ಡಿ.ಎಮ್ ಬಿ.ವೈ.ಎನ್.ಎಸ್ ಕಾಲೇಜಿನ ಪಿ.ಡಿ ಧರ್ಮೇದ್ರ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ. ಎಸ್.ಇ) ಶಾಲೆ ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!