22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ.

ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ ಅಂಗಡಿಯೊಂದರ ಹಿಂಬದಿಯಲ್ಲಿ ಬೆಳಾಲು ನಿವಾಸಿ ಭಾಸ್ಕರ್ ಎಂಬವರು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಅಮಲು ಪದಾರ್ಥವನ್ನು ಶೇಖರಿಸಿಟ್ಟು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅನೀಲ್ ಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿರುತ್ತಾರೆ.

ಈ ವೇಳೆ ಆರೋಪಿಯು ಪರಾರಿಯಾಗಿದ್ದು, ಸ್ಥಳದಲ್ಲಿ ಸುಮಾರು ರೂ 1680/-ಮೌಲ್ಯದ 42 ಮದ್ಯದ ಸ್ಯಾಚೆಟ್ ಗಳು (3.7 ಲೀಟರ್ ) ಕಂಡುಬಂದಿರುತ್ತದೆ. ಸದರಿ ಮದ್ಯದ ಸ್ಯಾಚೆಟ್ ಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 103/2023 ಕಲಂ 32, 34 KE Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!