23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ.

ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ ಅಂಗಡಿಯೊಂದರ ಹಿಂಬದಿಯಲ್ಲಿ ಬೆಳಾಲು ನಿವಾಸಿ ಭಾಸ್ಕರ್ ಎಂಬವರು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಅಮಲು ಪದಾರ್ಥವನ್ನು ಶೇಖರಿಸಿಟ್ಟು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅನೀಲ್ ಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿರುತ್ತಾರೆ.

ಈ ವೇಳೆ ಆರೋಪಿಯು ಪರಾರಿಯಾಗಿದ್ದು, ಸ್ಥಳದಲ್ಲಿ ಸುಮಾರು ರೂ 1680/-ಮೌಲ್ಯದ 42 ಮದ್ಯದ ಸ್ಯಾಚೆಟ್ ಗಳು (3.7 ಲೀಟರ್ ) ಕಂಡುಬಂದಿರುತ್ತದೆ. ಸದರಿ ಮದ್ಯದ ಸ್ಯಾಚೆಟ್ ಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 103/2023 ಕಲಂ 32, 34 KE Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!