September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ.

ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ ಅಂಗಡಿಯೊಂದರ ಹಿಂಬದಿಯಲ್ಲಿ ಬೆಳಾಲು ನಿವಾಸಿ ಭಾಸ್ಕರ್ ಎಂಬವರು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಅಮಲು ಪದಾರ್ಥವನ್ನು ಶೇಖರಿಸಿಟ್ಟು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅನೀಲ್ ಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿರುತ್ತಾರೆ.

ಈ ವೇಳೆ ಆರೋಪಿಯು ಪರಾರಿಯಾಗಿದ್ದು, ಸ್ಥಳದಲ್ಲಿ ಸುಮಾರು ರೂ 1680/-ಮೌಲ್ಯದ 42 ಮದ್ಯದ ಸ್ಯಾಚೆಟ್ ಗಳು (3.7 ಲೀಟರ್ ) ಕಂಡುಬಂದಿರುತ್ತದೆ. ಸದರಿ ಮದ್ಯದ ಸ್ಯಾಚೆಟ್ ಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 103/2023 ಕಲಂ 32, 34 KE Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya
error: Content is protected !!