April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ತಾಲೂಕಿನಲ್ಲಿ ಕೊಂಚ ಕಡಿಮೆಯಾಗಿದ್ದ ಕಾಡಾನೆ ಕಾಟ ಮತ್ತೆ ಆರಂಭವಾಗಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮಾಕಳ ರಾಮಣ್ಣ ಗೌಡ ಎಂಬವರ ತೋಟಕ್ಕೆ ಶುಕ್ರವಾರ ತಡರಾತ್ರಿ ದಾಳಿ ಇಟ್ಟ ಕಾಡಾನೆಗಳು 50 ಬಾಳೆಗಿಡ, ಎರಡು ತೆಂಗಿನ ಮರ, ಅಡಕೆ ಮರಗಳನ್ನು ಧ್ವಂಸಗೊಳಿಸಿವೆ. ಮನೆಯಿಂದ ಅನತಿ ದೂರದ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗೆ ಆನೆಗಳು ತುಳಿದಿದ್ದು ನಷ್ಟ ಉಂಟಾಗಿದೆ.
ಗುಂಪಿನಲ್ಲಿ ಎರಡು ಆನೆಗಳಿದ್ದು ಒಂದು ಸಣ್ಣ ಆನೆ ಹಾಗೂ ಇನ್ನೊಂದು ದೊಡ್ಡ ಆನೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪರಿಸರದಲ್ಲಿ ತಿರುಗಾಟ ನಡೆಸುವ ಮೂರು ಆನೆಗಳ ಹಿಂಡಿನಿಂದ ಒಂದು ಆನೆ ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಈ ಗುಂಪಿನಲ್ಲಿ ಇರುವ ಮರಿಯಾನೆ ಕಳೆದ ನಾಲ್ಕು ವರ್ಷಗಳ ಹಿಂದೆ ಕಡಿರುದ್ಯಾವರದ ತೋಟವೊಂದರಲ್ಲಿ ಗುಂಪಿನಿಂದ ಬೇರ್ಪಟ್ಟು ಬಾಕಿಯಾಗಿದ್ದು,ಬಳಿಕ ಅದನ್ನು ಅರಣ್ಯ ಇಲಾಖೆ ಕಾಡಿಗೆ ಬಿಟ್ಟಿತ್ತು‌, ಈಗ ಈ ಮರಿಯಾನೆ ಹೆಚ್ಚಿನ ಬೆಳವಣಿಗೆ ಹೊಂದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ :

ಕಾಡಾನೆಗಳು ಕಂಡು ಬಂದ ಪ್ರದೇಶದಿಂದ 3 ಕಿ.ಮೀ ದೂರದಲ್ಲಿರುವ ತೋಟತ್ತಾಡಿ ಗ್ರಾಮದ ಕುಂಟಾಡಿ ಎಂಬಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ವಿಜು ಅವರ ಮನೆಯಲ್ಲಿ ಒಟ್ಟು ಮೂರು ಸಾಕು ನಾಯಿಗಳಿದ್ದು ಚಿರತೆ ಒಂದು ನಾಯಿಯ ಮೇಲೆ ದಾಳಿ ನಡೆಸಿದಾಗ ಉಳಿದ ಎರಡು ನಾಯಿಗಳು ಚಿರತೆಯ ಮೇಲೆ ದಾಳಿ ಮಾಡಿದ್ದು ಈ ಸಮಯ ಚಿರತೆ ಸ್ಥಳದಿಂದ ಓಡಿಹೋಗಿದೆ. ಚಿರತೆ ದಾಳಿಗೆ ತುತ್ತಾದ ನಾಯಿ ಜೀವನ್ಮರಣ ಪರಿಸ್ಥಿತಿಯಲ್ಲಿದೆ. ಸ್ಥಳಕ್ಕೆ ಡಿ ಆರ್ ಎಫ್ ಓ ಭವಾನಿ ಶಂಕರ್, ಸಿಬ್ಬಂದಿಗಳು ಭೇಟಿ ನೀಡಿದ್ದು,ಚಿರತೆ ಸೆರೆಗೆ ಬೋನು ಇರಿಸಲು ಕ್ರಮ ಕೈಗೊಂಡಿದ್ದಾರೆ.

Related posts

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya
error: Content is protected !!