23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ತಾಲೂಕಿನಲ್ಲಿ ಕೊಂಚ ಕಡಿಮೆಯಾಗಿದ್ದ ಕಾಡಾನೆ ಕಾಟ ಮತ್ತೆ ಆರಂಭವಾಗಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮಾಕಳ ರಾಮಣ್ಣ ಗೌಡ ಎಂಬವರ ತೋಟಕ್ಕೆ ಶುಕ್ರವಾರ ತಡರಾತ್ರಿ ದಾಳಿ ಇಟ್ಟ ಕಾಡಾನೆಗಳು 50 ಬಾಳೆಗಿಡ, ಎರಡು ತೆಂಗಿನ ಮರ, ಅಡಕೆ ಮರಗಳನ್ನು ಧ್ವಂಸಗೊಳಿಸಿವೆ. ಮನೆಯಿಂದ ಅನತಿ ದೂರದ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗೆ ಆನೆಗಳು ತುಳಿದಿದ್ದು ನಷ್ಟ ಉಂಟಾಗಿದೆ.
ಗುಂಪಿನಲ್ಲಿ ಎರಡು ಆನೆಗಳಿದ್ದು ಒಂದು ಸಣ್ಣ ಆನೆ ಹಾಗೂ ಇನ್ನೊಂದು ದೊಡ್ಡ ಆನೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪರಿಸರದಲ್ಲಿ ತಿರುಗಾಟ ನಡೆಸುವ ಮೂರು ಆನೆಗಳ ಹಿಂಡಿನಿಂದ ಒಂದು ಆನೆ ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಈ ಗುಂಪಿನಲ್ಲಿ ಇರುವ ಮರಿಯಾನೆ ಕಳೆದ ನಾಲ್ಕು ವರ್ಷಗಳ ಹಿಂದೆ ಕಡಿರುದ್ಯಾವರದ ತೋಟವೊಂದರಲ್ಲಿ ಗುಂಪಿನಿಂದ ಬೇರ್ಪಟ್ಟು ಬಾಕಿಯಾಗಿದ್ದು,ಬಳಿಕ ಅದನ್ನು ಅರಣ್ಯ ಇಲಾಖೆ ಕಾಡಿಗೆ ಬಿಟ್ಟಿತ್ತು‌, ಈಗ ಈ ಮರಿಯಾನೆ ಹೆಚ್ಚಿನ ಬೆಳವಣಿಗೆ ಹೊಂದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ :

ಕಾಡಾನೆಗಳು ಕಂಡು ಬಂದ ಪ್ರದೇಶದಿಂದ 3 ಕಿ.ಮೀ ದೂರದಲ್ಲಿರುವ ತೋಟತ್ತಾಡಿ ಗ್ರಾಮದ ಕುಂಟಾಡಿ ಎಂಬಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ವಿಜು ಅವರ ಮನೆಯಲ್ಲಿ ಒಟ್ಟು ಮೂರು ಸಾಕು ನಾಯಿಗಳಿದ್ದು ಚಿರತೆ ಒಂದು ನಾಯಿಯ ಮೇಲೆ ದಾಳಿ ನಡೆಸಿದಾಗ ಉಳಿದ ಎರಡು ನಾಯಿಗಳು ಚಿರತೆಯ ಮೇಲೆ ದಾಳಿ ಮಾಡಿದ್ದು ಈ ಸಮಯ ಚಿರತೆ ಸ್ಥಳದಿಂದ ಓಡಿಹೋಗಿದೆ. ಚಿರತೆ ದಾಳಿಗೆ ತುತ್ತಾದ ನಾಯಿ ಜೀವನ್ಮರಣ ಪರಿಸ್ಥಿತಿಯಲ್ಲಿದೆ. ಸ್ಥಳಕ್ಕೆ ಡಿ ಆರ್ ಎಫ್ ಓ ಭವಾನಿ ಶಂಕರ್, ಸಿಬ್ಬಂದಿಗಳು ಭೇಟಿ ನೀಡಿದ್ದು,ಚಿರತೆ ಸೆರೆಗೆ ಬೋನು ಇರಿಸಲು ಕ್ರಮ ಕೈಗೊಂಡಿದ್ದಾರೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya
error: Content is protected !!