July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ 18ನೇ
ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಾಣಿ ಕಾಲೇಜಿನ ರಮಾನಂದ ಸಾಲಿಯಾನ್ ವೇದಿಕೆಯಲ್ಲಿ
ಕನಾ೯ಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ನಾಗರಾಜ್ ರಾವ್ ಕಲ್ಕಟೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಸಮ್ಮೇಳನವನ್ನು ನಿವೃತ್ತ ಪ್ರಾಂಶುಪಾಲ
ಪ್ರೊ. ಎ. ಕೃಷ್ಣಪ್ಪ ಪೂಜಾರಿ ಅವರು ವಹಿಸಿದ್ದರು.
ಸಾಹಿತ್ಯ ಸಮ್ಮೇಳನದ ಅಂಗವಾಗಿ ಹೊರತಂದ ಚಾರುಮುಡಿ ಸಂಚಿಕೆಯನ್ನು ಶಾಸಕ ಹರೀಶ್ ಪೂಂಜ ಬಿಡುಗಡೆ ಗೊಳಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್,ಪ್ರತಾಪಸಿಂಹ ನಾಯಕ್, ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸತೀಶ್ಚಂದ್ರ ಎಸ್, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಬೆಂಗಳೂರು, ಭಾಗವಹಿಸಿದ್ದರು.
ರಾಷ್ಟ್ರಧ್ವಜವನ್ನು ಕೆ. ಹರೀಶ ಕುಮಾರ್ ಶಾಸಕರು, ಕರ್ನಾಟಕ ವಿಧಾನ ಪರಿಷತ್ತು

ಪರಿಷತ್ತು ಧ್ವಜವನ್ನು ಡಾ. ಎಂ. ಪಿ. ಶ್ರೀನಾಥ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ,ಸಮ್ಮೇಳನ ಧ್ವಜ ವನ್ನುಶ್ರೀ ಡಿ. ಯದುಪತಿ ಗೌಡ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕ ನೇರವೇರಿಸಿದರು.
‌ವೇದಿಕೆಯಲ್ಲಿ ಜಿಲ್ಲಾ ಕಾಯ೯ದಶಿ೯ ರಾಜೇಶ್ವರಿ, ಶ್ರೀಶ ಮುಚ್ಚಿನ್ನಾಯ, ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು, ಕಾಯ೯ದಶಿ೯ಗಳಾದ ಪ್ರಮೀಳಾ, ಕೋಶಾಧಿಕಾರಿ ಮೀನಾಕ್ಷಿ, ಡಾ.
ಮಾಧವ, ಉಮೇಶ್ ಪುತ್ತೂರು ಉಪಸ್ಥಿತರಿದ್ದರು.

ಸ.ಸಂ.ಸ.ಅಧ್ಯಕ್ಷಜಯಾನಂದ ಗೌಡ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು,
ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಪ್ರಸ್ತಾವನೆ ಮಾಡಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ ಆಶಯ ನುಡಿಗಳನ್ನಾಡಿದರು.
ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಕಾರ್ಯದರ್ಶಿ,
ರಾಮಕೃಷ್ಣ ಭಟ್ ಬೆಳಾಲು ಧನ್ಯವಾದವಿತ್ತರು.ಮಹಾವೀರ ಜೈನ್ ಮತ್ತು ಶ್ರೀಮತಿ ವಸಂತಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya
error: Content is protected !!