July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ತಾಲೂಕಿನ ಬಂದಾರು ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗಳು ಓಡಿಶಾ ರಾಜ್ಯದ ಭುವನೇಶ್ವರ್ ನಲ್ಲಿ ಡಿ.22 ರಿಂದ ಡಿ.26 ರವರೆಗೆ ನಡೆಯುವ 67 ನೇ ರಾಷ್ಟ್ರಮಟ್ಟದ 14 ವರ್ಷ ವಯೋಮಿತಿಯ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳನ್ನು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರಾದ ಮೋಹನ್ ಕುಮಾರ್ ಡಿ.18 ರಂದು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಹುಗುಚ್ಚ ನೀಡಿ ಶುಭಹಾರೈಸಿದರು.ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ” ಕನಸು” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈ ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡಿರುತ್ತದೆ‌.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ “ನಮ್ಮೂರು ಕನ್ನಡ ಶಾಲೆ ನಮ್ಮ ಹೆಮ್ಮೆ” ಕಾರ್ಯಕ್ರಮದ ಅಡಿಯಲ್ಲಿ ಡಿ.18 ರಂದು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಸಂಚಾಲಕರಾದ ಮೋಹನ್ ಕುಮಾರ್ ರವರು ಶಾಲೆಗೆ ಭೇಟಿ ನೀಡಿದರು. ಈ ವೇಳೆ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ನೀಡಿದ್ದಾರೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!