September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ತಾಲೂಕಿನ ಬಂದಾರು ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗಳು ಓಡಿಶಾ ರಾಜ್ಯದ ಭುವನೇಶ್ವರ್ ನಲ್ಲಿ ಡಿ.22 ರಿಂದ ಡಿ.26 ರವರೆಗೆ ನಡೆಯುವ 67 ನೇ ರಾಷ್ಟ್ರಮಟ್ಟದ 14 ವರ್ಷ ವಯೋಮಿತಿಯ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳನ್ನು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರಾದ ಮೋಹನ್ ಕುಮಾರ್ ಡಿ.18 ರಂದು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಹುಗುಚ್ಚ ನೀಡಿ ಶುಭಹಾರೈಸಿದರು.ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ” ಕನಸು” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈ ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡಿರುತ್ತದೆ‌.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ “ನಮ್ಮೂರು ಕನ್ನಡ ಶಾಲೆ ನಮ್ಮ ಹೆಮ್ಮೆ” ಕಾರ್ಯಕ್ರಮದ ಅಡಿಯಲ್ಲಿ ಡಿ.18 ರಂದು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಸಂಚಾಲಕರಾದ ಮೋಹನ್ ಕುಮಾರ್ ರವರು ಶಾಲೆಗೆ ಭೇಟಿ ನೀಡಿದರು. ಈ ವೇಳೆ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ನೀಡಿದ್ದಾರೆ.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!