September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

ಕೊಕ್ಕಡ: ಸರಕಾರದ ಲೆಕ್ಕಾಚಾರದಂತೆ 6೦ ವರ್ಷಕ್ಕೆ ನಿವೃತ್ತಿಯಾದರೆ  ಅವರು ಖಿನ್ನತೆಗೊಳಗಾಗುತ್ತಾರೆ. ಅವರಿಗೆ ಸಮಾಜದ ಬಗೆಗಿರುವ ಬದ್ಧತೆ,ಕಾರ್ಯಕಲಾಪಗಳ ಬಗೆಗೆ ಬದ್ಧತೆಯ ಅರಿವಾಗುತ್ತದೆ.  ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಅವರಲ್ಲಿ ಕ್ರಿಯಾಶೀಲತೆಗೆ ಭಂಗವಿರುವುದಿಲ್ಲ  ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ  ಭಾರತಿ ಸ್ವಾಮೀಜಿಯವರು ನುಡಿದರು.                                     

ಅವರು ಡಿ. 17ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಗಣೇಶ ಕಲಾ ಭವನದಲ್ಲಿ  ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್, ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ  ವಹಿಸಿದ್ದ  ಶ್ರೀ ಸೌತಡ್ಕ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರು ಪ್ಪಾಡಿ ಹಿರಿಯ ಸಾಧಕರ ಅನುಭವ ಇತರರಿಗೆ ಮಾದರಿಯಾಗಿದೆ. ಹಿರಿಯರು ಒಗ್ಗಟ್ಟಿನಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಸಮಾಜಮುಖಿ ಕಾರ್ಯಕ್ರಮ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ. ಯುವಕರಲ್ಲಿ ಕೃಷಿಯ ಬಗ್ಗೆ ಆಸಕ್ತಿಯಿಲ್ಲದೆ  ಕೃಷಿಯಲ್ಲಿ ತೊಡಗಿಸಿಕೊಳ್ಳುವವರು ಹಿರಿಯರು ಮಾತ್ರ. ಯುವಕರಲ್ಲಿ ಆತ್ಮಸ್ಥೈರ್ಯ ತುಂಬಿಕೊಳ್ಳಲು ಹಿರಿಯರ ಸೇವಾ ಪ್ರತಿಷ್ಠಾನ ಪೂರಕವಾಗಿದೆ. ನಮ್ಮ ಸಂಸ್ಕೃತಿ,ಸಾಮಾಜಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪ್ರೇರಣೆಯಾಗಲಿ ಎಂದು ಆಶಿಸಿದರು.             

ಬೆಳ್ತಂಗಡಿ ಭಾರತೀಯ ಜೀವ ವಿಮಾ ನಿಗಮದ ಬ್ರಾಂಚ್  ಮ್ಯಾನೇಜರ್   ವಿ. ಎಸ್ .ಕುಮಾರ್  ಸಂಧ್ಯಾಕಾಲದ ಸಂತೋಷದ ಜೀವನವನ್ನು  ರೂಪಿಸುವ ವ್ಯವಸ್ಥೆಯನ್ನು ಪೋಷಕರು ಮೊದಲೇ ಮಾಡಿಕೊಳ್ಳಬೇಕು  ಎಂದು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಸೌತಡ್ಕದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್,  ಹಿರಿಯರ ಸೇವಾ ಪ್ರತಿಷ್ಠಾನದ ಸಹಸಂಚಾಲಕ ಭಾಸ್ಕರ ಬಾರ್ಯ, ಉಪಾಧ್ಯಕ್ಷ ಜಯರಾಮ ಭಂಡಾರಿ ಉಪಸ್ಥಿತರಿದ್ದರು.       

ಸ್ವಾಗತಿಸಿ, ಪ್ರಸ್ತಾವಿಸಿದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್  ಪ್ರತಿಷ್ಠಾನವು  5 ಜಿಲ್ಲಾ ವ್ಯಾಪ್ತಿ ಹೊಂದಿದ ಸದಸ್ಯರ ಸಹಕಾರದಿಂದ  ಒಂದು ಸಹಕಾರಿ ಸಂಘದ ಸ್ಥಾಪನೆ,   ಆಶ್ರಮ ಹಾಗು ಗೋಶಾಲೆಯನ್ನು ನಡೆಸುವುದು ಹಾಗು ಗುರುಕುಲ ಪದ್ಧತಿಯ ಶಿಕ್ಷಣ ನೀಡುವ ಉದ್ದೇಶ ಹೊಂದಿದೆ ಎಂದರು. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿ, ಮಹಾಲಿಂಗ ಭಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಉಜಿರೆ–ಬೆಳಾಲು ಓಡಲ ರಸ್ತೆಯಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ದಿಣ್ಣೆ: ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ರಿಪ್ಲೆಕ್ಟರ್ ಅಳವಡಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!