22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

ಕೊಕ್ಕಡ: ಸರಕಾರದ ಲೆಕ್ಕಾಚಾರದಂತೆ 6೦ ವರ್ಷಕ್ಕೆ ನಿವೃತ್ತಿಯಾದರೆ  ಅವರು ಖಿನ್ನತೆಗೊಳಗಾಗುತ್ತಾರೆ. ಅವರಿಗೆ ಸಮಾಜದ ಬಗೆಗಿರುವ ಬದ್ಧತೆ,ಕಾರ್ಯಕಲಾಪಗಳ ಬಗೆಗೆ ಬದ್ಧತೆಯ ಅರಿವಾಗುತ್ತದೆ.  ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಅವರಲ್ಲಿ ಕ್ರಿಯಾಶೀಲತೆಗೆ ಭಂಗವಿರುವುದಿಲ್ಲ  ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ  ಭಾರತಿ ಸ್ವಾಮೀಜಿಯವರು ನುಡಿದರು.                                     

ಅವರು ಡಿ. 17ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಗಣೇಶ ಕಲಾ ಭವನದಲ್ಲಿ  ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್, ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ  ವಹಿಸಿದ್ದ  ಶ್ರೀ ಸೌತಡ್ಕ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರು ಪ್ಪಾಡಿ ಹಿರಿಯ ಸಾಧಕರ ಅನುಭವ ಇತರರಿಗೆ ಮಾದರಿಯಾಗಿದೆ. ಹಿರಿಯರು ಒಗ್ಗಟ್ಟಿನಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಸಮಾಜಮುಖಿ ಕಾರ್ಯಕ್ರಮ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ. ಯುವಕರಲ್ಲಿ ಕೃಷಿಯ ಬಗ್ಗೆ ಆಸಕ್ತಿಯಿಲ್ಲದೆ  ಕೃಷಿಯಲ್ಲಿ ತೊಡಗಿಸಿಕೊಳ್ಳುವವರು ಹಿರಿಯರು ಮಾತ್ರ. ಯುವಕರಲ್ಲಿ ಆತ್ಮಸ್ಥೈರ್ಯ ತುಂಬಿಕೊಳ್ಳಲು ಹಿರಿಯರ ಸೇವಾ ಪ್ರತಿಷ್ಠಾನ ಪೂರಕವಾಗಿದೆ. ನಮ್ಮ ಸಂಸ್ಕೃತಿ,ಸಾಮಾಜಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪ್ರೇರಣೆಯಾಗಲಿ ಎಂದು ಆಶಿಸಿದರು.             

ಬೆಳ್ತಂಗಡಿ ಭಾರತೀಯ ಜೀವ ವಿಮಾ ನಿಗಮದ ಬ್ರಾಂಚ್  ಮ್ಯಾನೇಜರ್   ವಿ. ಎಸ್ .ಕುಮಾರ್  ಸಂಧ್ಯಾಕಾಲದ ಸಂತೋಷದ ಜೀವನವನ್ನು  ರೂಪಿಸುವ ವ್ಯವಸ್ಥೆಯನ್ನು ಪೋಷಕರು ಮೊದಲೇ ಮಾಡಿಕೊಳ್ಳಬೇಕು  ಎಂದು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಸೌತಡ್ಕದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್,  ಹಿರಿಯರ ಸೇವಾ ಪ್ರತಿಷ್ಠಾನದ ಸಹಸಂಚಾಲಕ ಭಾಸ್ಕರ ಬಾರ್ಯ, ಉಪಾಧ್ಯಕ್ಷ ಜಯರಾಮ ಭಂಡಾರಿ ಉಪಸ್ಥಿತರಿದ್ದರು.       

ಸ್ವಾಗತಿಸಿ, ಪ್ರಸ್ತಾವಿಸಿದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್  ಪ್ರತಿಷ್ಠಾನವು  5 ಜಿಲ್ಲಾ ವ್ಯಾಪ್ತಿ ಹೊಂದಿದ ಸದಸ್ಯರ ಸಹಕಾರದಿಂದ  ಒಂದು ಸಹಕಾರಿ ಸಂಘದ ಸ್ಥಾಪನೆ,   ಆಶ್ರಮ ಹಾಗು ಗೋಶಾಲೆಯನ್ನು ನಡೆಸುವುದು ಹಾಗು ಗುರುಕುಲ ಪದ್ಧತಿಯ ಶಿಕ್ಷಣ ನೀಡುವ ಉದ್ದೇಶ ಹೊಂದಿದೆ ಎಂದರು. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿ, ಮಹಾಲಿಂಗ ಭಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

Related posts

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ

Suddi Udaya
error: Content is protected !!