ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ,

ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ ಉದ್ಘಾಟಿಸಲಿರುವರು. ಆಶೀರ್ವಚನವನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ನ ಪ್ರಧಾನ ಧರ್ಮಗುರು ವಂ|ಫಾ| ಸ್ಟಾನಿ ಗೋವಿಯಸ್ ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಪ್ರಾಂಶುಪಾಲರು ವಂ| ಫಾ| ಕ್ಲಿಫರ್ಡ್ ಪಿಂಟೊ ಗೌರವ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಭಾರತಿ ಎಸ್ ಶೆಟ್ಟಿ, ಬಿಲ್ಡರ್ ಅಶ್ವಿನ್ ಪಿರೇರಾ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ವಿಜಯ್ ಡಿಕ್ಹುನ ತಿಳಿಸಿದ್ದಾರೆ.

ವಿಶೇಷತೆಗಳು: ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, 300ಕ್ಕೂ ಅಧಿಕ ಆಸನ ವ್ಯವಸ್ಥೆಗೊಳಿಸಬಹುದಾದ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ, ಫ್ಯಾಮಿಲಿ ಬಾರ್ ಹಾಗೂ ರೆಸ್ಟೋರೆಂಟ್, ವಿಶಾಲವಾದ ಪಾರ್ಕಿಂಗ್ ಸೌಲಭ್ಯ ಇರಲಿದೆ.

Leave a Comment

error: Content is protected !!