22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

ಬೆಳ್ತಂಗಡಿ: “ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯ ಪ್ರತಿಪಕ್ಷ ಮುಂದಿಟ್ಟ ರಾಜ್ಯದ ಸಮಸ್ಯೆಗಳಿಗೆ ಸರಕಾರ ನೀಡಿದ ಉತ್ತರಗಳಿಂದ ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ ಗೊಂಡಿದೆ”ಎಂದು ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿದರು.

ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಡಿ .18ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ “ರಾಜ್ಯವು 125ವರ್ಷಗಳಿಂದ ಕಾಣದ ಬರಗಾಲ ಸ್ಥಿತಿ ಎದುರಿಸುತ್ತಿದೆ. ಆದರೂ ಸರಕಾರ ಈ ಬಗ್ಗೆ ಇನ್ನೂ ಯಾವುದೇ ಪರಿಹಾರ ನೀಡಲು ಕ್ರಮ ಕೈಗೊಂಡಿಲ್ಲ. 2ಸಾವಿರ ರೂ.ಘೋಷಣೆ ಮಾಡಿದ್ದರು ಅದು ರೈತರ ಖಾತೆ ತಲುಪಿಲ್ಲ. ಉತ್ತರ ಕರ್ನಾಟಕದಲ್ಲಿ ನೆನೆಗುದಿಗೆ ಬಿದ್ದಿರುವ ನೀರಿನ ಯೋಜನೆಗಳ ಕುರಿತು ಯೋಚಿಸಿಲ್ಲ. ಅಧಿವೇಶನದಲ್ಲಿ ಬರ ನಿರ್ವಹಣೆಗೆ 10ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆಗೆ ಹಾಗೂ ರೈತರಿಗೆ 2ಲಕ್ಷ ರೂ.ವರೆಗೆ ಸಾಲ ಮನ್ನಾ ಮಾಡಲು ಪ್ರತಿಪಕ್ಷ ಆಗ್ರಹಿಸಿತ್ತು, ಆದರೆ ಸರಕಾರ ಸ್ಪಂದನೆ ನೀಡಿಲ್ಲ. ಹಿಂದುಳಿದ ವರ್ಗಕ್ಕೆ 50ಕೋಟಿ ರೂ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು ಸರಕಾರ ಅದನ್ನು ಬಿಡುಗಡೆ ಗೊಳಿಸುವ ಸ್ಥಿತಿಯಲ್ಲಿಲ್ಲ ಎಂದರು.
ಇದುವರೆಗೆ ಸರಕಾರ ನಿಗಮಗಳಿಗೆ ಒಂದು ರೂ.ಬಿಡುಗಡೆ ಗೊಳಿಸಿರುವುದಿಲ್ಲ.ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11ಸಾವಿರ ಕೋಟಿ ರೂ.ಗ್ಯಾರಂಟಿ ಯೋಜನೆಗೆ ಉಪಯೋಗಿಸಿ ಅನ್ಯಾಯ ಮಾಡಲಾಗಿದೆ. ರೈತರ, ಶಾಲಾ ಮಕ್ಕಳ, ಕಾರ್ಮಿಕರ ಹಲವು ಯೋಜನೆಗಳನ್ನು ಕಡಿತಗೊಳಿಸಲಾಗಿದೆ.
ಶಾಸಕರ ಪ್ರದೇಶಾಭಿವೃದ್ದಿ ನಿಧಿಯ 2ಕೋಟಿ ರೂ. ಪೈಕಿ,50 ಲಕ್ಷ ರೂ. ಮಾತ್ರ ಬಿಡುಗಡೆಗೊಂಡಿದೆ. ಒಟ್ಟಿನಲ್ಲಿ ಎಲ್ಲರಿಗೂ ಉಚಿತ, ಆರ್ಥಿಕ ಹಿನ್ನಡೆ ಖಚಿತ ಎಂಬ ಸ್ಥಿತಿ ಸದ್ಯ ರಾಜ್ಯದಲ್ಲಿದೆ” ಎಂದು ಹೇಳಿದರು.


-ಬಿಡುಗಡೆಗೊಳ್ಳದ ಕೃಷಿಸಾಲದ ಹೆಚ್ಚುವರಿ ಮೊತ್ತ-
ಈ ಬಾರಿಯ ಬಜೆಟ್ ನಲ್ಲಿ ಶೂನ್ಯ ದರದಲ್ಲಿ ಸಹಕಾರಿ ಸಂಘಗಳು ನೀಡುವ 3ಲಕ್ಷ ರೂ.ಸಾಲವನ್ನು 5ಲಕ್ಷ ರೂ.ಗೆ,ಹಾಗೂ ದೀರ್ಘಾವಧಿ ಸಾಲದ ಮೊತ್ತವನ್ನು 10ರಿಂದ 15ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಆದರೆ ಸರಕಾರ ಇನ್ನೂ ಹಣ ಬಿಡುಗಡೆಗೊಳಿಸದ ಕಾರಣ ಇದು ರೈತರನ್ನು ತಲುಪಿಲ್ಲ.ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ತಾಲೂಕಿನ ಫಾರ್ಮ್ ನಂ.3,ವಿದ್ಯುತ್ ಕಡಿತ ಕಳೆಂಜದ ಘಟನೆಯನ್ನು ಸರಕಾರದ ಗಮನಕ್ಕೆ ತರಲಾಗಿದೆ. ಕಳೆಂಜದ ವಿಚಾರ ವಿಧಾನ ಸಭೆ,ಪರಿಷತ್ ನ ಹಕ್ಕುಚ್ಯುತಿ ಸಮಿತಿ ಮುಂದಿದ್ದು, ಅರಣ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಶ್ರೀನಿವಾಸ್ ರಾವ್, ಸಹಕಾರಿ ಧುರೀಣ ಮಹಾವೀರ ಮರೋಡಿ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya
error: Content is protected !!